ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ದಿನೇಶ್ ಕಾರ್ತಿಕ್ ತಮ್ಮ ನೆಚ್ಚಿನ ಪ್ಲೇಯಿಂಗ್-11 ಅನ್ನು ಪ್ರಕಟಿಸಿದ್ದಾರೆ. ಈ ತಂಡದಲ್ಲಿ ದ್ವಿಶತಕ ವೀರ ಇಶಾನ್ ಕಿಶನ್‌ಗೆ ಸ್ಥಾನ ನೀಡದೆ, ಅವರ ಬದಲು ಕೆ.ಎಲ್. ರಾಹುಲ್‌ಗೆ ಅವಕಾಶ ನೀಡಲಾಗಿದೆ. ಅಚ್ಚರಿಯ ಆಯ್ಕೆಯಾಗಿ ಶಿವಂ ದುಬೆ ಮತ್ತು ಯುವ ವೇಗಿ ಪ್ರಿನ್ಸ್ ಯಾದವ್‌ಗೆ ಮಣೆ ಹಾಕಲಾಗಿದೆ.

ಬರ್ಮಿಂಗ್‌ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಹೀನಾಯ ಸೋಲು ಅನುಭವಿಸಿದ ಬಳಿಕ ಟೀಮ್ ಇಂಡಿಯಾ ಈಗ ಏಕದಿನ ಸರಣಿಯತ್ತ ಕಣ್ಣಿಟ್ಟಿದೆ. ಎಡ್ಜ್‌ಬಾಸ್ಟನ್‌ನಲ್ಲಿ ಇಂದು ನಡೆಯಲಿರುವ ಮೊದಲ ಪಂದ್ಯಕ್ಕೆ ಭಾರತದ ಪ್ಲೇಯಿಂಗ್-11 ಹೇಗಿರಬೇಕು ಎಂಬ ಚರ್ಚೆ ಜೋರಾಗಿದೆ. ಇದರ ನಡುವೆ ಭಾರತದ ಮಾಜಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ತಮ್ಮ ನೆಚ್ಚಿನ 11 ಆಟಗಾರರ ತಂಡವನ್ನು ಆರಿಸಿದ್ದಾರೆ. ಕಾರ್ತಿಕ್ ಅವರ ಈ ಪಟ್ಟಿಯಲ್ಲಿ ಕೆಲವು ಅಚ್ಚರಿಯ ನಿರ್ಧಾರಗಳಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದ್ವಿಶತಕ ವೀರ ಇಶಾನ್ ಕಿಶನ್‌ಗೆ ಕೊಕ್!

ದಿನೇಶ್ ಕಾರ್ತಿಕ್ ಅವರ ಪ್ಲೇಯಿಂಗ್-11 ನಲ್ಲಿ ಕಂಡುಬಂದ ಅತ್ಯಂತ ದೊಡ್ಡ ಬದಲಾವಣೆ ಎಂದರೆ ಸ್ಫೋಟಕ ಬ್ಯಾಟರ್ ಇಶಾನ್ ಕಿಶನ್ ಅವರ ಅನುಪಸ್ಥಿತಿ. ಏಕದಿನ ಕ್ರಿಕೆಟ್‌ನಲ್ಲಿ ಕೇವಲ 126 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ ದಾಖಲೆ ಹೊಂದಿರುವ ಕಿಶನ್ ಅವರನ್ನು ಕಾರ್ತಿಕ್ ಕೈಬಿಟ್ಟಿದ್ದಾರೆ. ಅವರ ಬದಲು ಮಧ್ಯಮ ಕ್ರಮಾಂಕದಲ್ಲಿ ಕೆ.ಎಲ್. ರಾಹುಲ್ ಅವರಿಗೆ ಸ್ಥಾನ ನೀಡಿದ್ದಾರೆ.

ಟಾಪ್ ಆರ್ಡರ್‌ನಲ್ಲಿ ಬದಲಾವಣೆ ಇಲ್ಲ

ಬ್ಯಾಟಿಂಗ್ ವಿಭಾಗದಲ್ಲಿ ಕಾರ್ತಿಕ್ ಹಳೆಯ ಅನುಭವಿಗಳಿಗೇ ಮಣೆ ಹಾಕಿದ್ದಾರೆ. ಶುಭ್‌ಮನ್ ಗಿಲ್ ಮತ್ತು ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಮತ್ತು ಐದನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಆಗಿ ಕೆ.ಎಲ್. ರಾಹುಲ್ ತಂಡದಲ್ಲಿದ್ದಾರೆ.

ಶಿವಂ ದುಬೆಗೆ ಜವಾಬ್ದಾರಿ

ಹಾರ್ದಿಕ್ ಪಾಂಡ್ಯ ಅಲಭ್ಯತೆಯಲ್ಲಿ ಕಾರ್ತಿಕ್ ಅವರು ಆರನೇ ಕ್ರಮಾಂಕದಲ್ಲಿ ವೇಗದ ಬೌಲಿಂಗ್ ಆಲ್ರೌಂಡರ್ ಆಗಿ ಶಿವಂ ದುಬೆ ಅವರನ್ನು ಆಯ್ಕೆ ಮಾಡಿದ್ದಾರೆ. ಏಳನೇ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ ಸ್ಪಿನ್ ಮತ್ತು ಬ್ಯಾಟಿಂಗ್ ಬಲ ತುಂಬಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಕಾರ್ತಿಕ್ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಅನುಭವಿಗಳಾದ ಪ್ರಸಿದ್ಧ್ ಕೃಷ್ಣ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಕೈಬಿಟ್ಟು, ಯುವ ವೇಗಿ ಪ್ರಿನ್ಸ್ ಯಾದವ್ ಅವರಿಗೆ ಸ್ಥಾನ ನೀಡಿದ್ದಾರೆ. ಜಸ್ಪ್ರೀತ್ ಬುಮ್ರಾ ಮತ್ತು ಅರ್ಶದೀಪ್ ಸಿಂಗ್ ಅವರೊಂದಿಗೆ ಪ್ರಿನ್ಸ್ ಯಾದವ್ ವೇಗದ ದಾಳಿಯನ್ನು ಮುನ್ನಡೆಸಲಿದ್ದಾರೆ. ಸ್ಪಿನ್ ವಿಭಾಗದಲ್ಲಿ ಕುಲದೀಪ್ ಯಾದವ್ ಮತ್ತು ಅಕ್ಷರ್ ಪಟೇಲ್ ಜೋಡಿ ಇರಲಿದೆ.

ದಿನೇಶ್ ಕಾರ್ತಿಕ್ ಆಯ್ದ ಭಾರತದ ಪ್ಲೇಯಿಂಗ್-11: ಶುಭ್‌ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಪ್ರಿನ್ಸ್ ಯಾದವ್, ಅರ್ಶದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.