ದಾರಿ ಮಧ್ಯೆ ಬೈಕ್ ಅಡ್ಡಗಟ್ಟಿ ಅಡಿಕೆ ವ್ಯಾಪಾರಿಯಿಂದ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಎರಡು ವರ್ಷಗಳ ಬಳಿಕ ಹತ್ತು ಆರೋಪಿಗಳನ್ನು ಬಂಧಿಸಿದ್ದಾರೆ.

ಚಿತ್ರದುರ್ಗ (ಜ.2): ದಾರಿ ಮಧ್ಯೆ ಬೈಕ್ ಅಡ್ಡಗಟ್ಟಿ ಅಡಿಕೆ ವ್ಯಾಪಾರಿಯಿಂದ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಎರಡು ವರ್ಷಗಳ ಬಳಿಕ ಹತ್ತು ಆರೋಪಿಗಳನ್ನು ಬಂಧಿಸಿದ್ದಾರೆ.

Add Asianetnews Kannada as a Preferred SourcegooglePreferred

ದಾವಣಗೆರೆ ಮೂಲದ ಶಶಿಕಿರಣ್, ಬೆಂಗಳೂರಿನ ನವೀನ್, ದಾವಣಗೆರೆಯ ಮಂಜುನಾಥ್, ಪ್ರತಾಪ್ ಗೌಡ, ಕಿರಣ್, ಚಿತ್ರದುರ್ಗದ ಷಫಿವುಲ್ಲಾ, ಸಮೀರ ಭಾಷಾ, ದಾವಣಗೆರೆಯ ಲಿಂಗರಾಜ್, ಬೆಂಗಳೂರಿನ ಹುಸೇನ್, ಶ್ರೀನಿವಾಸ್ ಬಂಧಿತರು.

ಬೆಂಗಳೂರು: ತನ್ನ ತಪ್ಪಿಲ್ಲದಿದ್ದರೂ ಕಾಲೇಜಿಂದ ಸಸ್ಪೆಂಡ್, ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಡಿಸೆಂಬರ್ 3 2022ರಂದು ನಡೆದಿದ್ದ ರಾಬರಿ ಪ್ರಕರಣ. ಅಡಿಕೆ ವ್ಯಾಪಾರಿ ಇರ್ಫಾನುಲ್ಲಾ & ಜಾಕೀರ್ ಬೈಕ್ ಅಡ್ಡಗಟ್ಟಿ ಹಣ ದರೋಡೆ ಮಾಡಿದ್ದ ಆರೋಪಿಗಳು. ದರೋಡೆ ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ಬೆನ್ನುಹತ್ತಿದ ಪೊಲೀಸರು ಕೊನೆಗೂ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರ ಬಳಿ 63ಲಕ್ಷ 2500ಸಾವಿರ ರೂ.‌ನಗದು, ದರೋಡೆ ಹಣದಲ್ಲಿ ಖರೀದಿಸಿದ್ದ ಸುಮಾರು 9 ಲಕ್ಷ ರೂ. ಮೌಲ್ಯದ ಕಾರು, 1.35 ಲಕ್ಷ ಮೌಲ್ಯದ ಬೈಕ್, ಕೃತ್ಯಕ್ಕೆ ಬಳಸಿದ್ದ 1ಕಾರು, 3ಬೈಕ್ ವಶಕ್ಕೆ ಪಡೆಯಲಾಗಿದೆ. 

ತಡರಾತ್ರಿ ಅಡುಗೆ ಮಾಡದ್ದಕ್ಕೆ ಪತ್ನಿ ಕೊಂದವನಿಗೆ ಜೀವಾವಧಿ..!