ಈ ಜಾಲದಿಂದ ಬೆಂಗಳೂರಿನ 6 ಪ್ರಕರಣಗಳು ಸೇರಿದಂತೆ ದೇಶ ವ್ಯಾಪ್ತಿ ನಡೆದಿದ್ದ 545 ಸೈಬರ್ ವಂಚನೆ ಪ್ರಕರಣಗಳು ಪತ್ತೆಯಾಗಿವೆ: ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ 

ಬೆಂಗಳೂರು(ಜ.10): ಫೆಡೆಕ್ಸ್ ಕೊರಿಯರ್‌ನಲ್ಲಿ ಡ್ರಗ್ಸ್ ಸಾಗಾಣಿಕೆ ನಡೆಸಿರುವುದಾಗಿ ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಮತ್ತೊಂದು ಜಾಲವನ್ನು ಆರೋಪಿಗಳನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಸೆರೆ ಹಿಡಿದಿದೆ. 14 ಮಂದಿ ಕೇರಳದ ಮೊಹಮ್ಮದ್‌ರ ಜೀ, ಮೊಹ್ಮಮದ್ ನಿಮ್ಹಾದ್, ಆಶೀಕ್, ನೌಶಾದ್, ಆರ್ಶದ್, ರಿಯಾಜ್, ನೌಫುಲ್, ರಾಜಸ್ಥಾನದ ದಿಲೀಪ್ ಸೋನಿ, ರಮೇಶ್ ಕುಮಾರ್, ಲಲಿತ್ ಗುಜರಾತ್‌ನ ಮಖಾನಿ ಕರೀಂ ಲಾಲ್‌, ಖಾಂಜಿ ಬಾಯ್‌ ರಬರಿ ಹಾಗೂ ಭಟ್ಕಳದ ಹಸೀ೦ ಅಫಾಗ್ನಿ ಮತ್ತು ಮೊಹಮ್ಮದ್ ಸಲೀಂ ಬಂಧಿತರಾಗಿದ್ದು, ಆರೋಪಿಗಳಿಂದ 25 ಲಕ್ಷ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಜಾಲದಿಂದ ಬೆಂಗಳೂರಿನ 6 ಪ್ರಕರಣಗಳು ಸೇರಿದಂತೆ ದೇಶ ವ್ಯಾಪ್ತಿ ನಡೆದಿದ್ದ 545 ಸೈಬರ್ ವಂಚನೆ ಪ್ರಕರಣಗಳು ಪತ್ತೆಯಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದರು. 

Add Asianetnews Kannada as a Preferred SourcegooglePreferred

ಸೈಬರ್‌ ವಂಚನೆ ಕೃತ್ಯಗಳ ತನಿಖೆಗೆ ನಾಲ್ಕು ಫೆಡೆಕ್ಸ್ ಮೂಲಕ ಕೊರಿಯರ್ ಬಂದಿದೆ ಎಂದು ಅಪರಿಚಿತರು ಕರೆ ಮಾಡುತ್ತಿದ್ದರು. ಬಳಿಕ ಇಂಟರ್‌ನೆಟ್ ವಾಯ್ಸ್ ರೆಸ್ಪಾನ್ಸ್ ಕರೆ ಮಾಡಿ, ನಿಮ್ಮ ಕೊರಿಯರ್ ಮುಂಬೈನಿಂದ ತೈವಾನ್‌ಗೆ ವರ್ಗಾಣೆಯಾಗುತ್ತಿದೆ. ಇದರಲ್ಲಿ ನಿಮ್ಮ ಹೆಸರು ಮತ್ತು ಆಧಾರ್ ಕಾರ್ಡ್ ಬಳಸಿ ಅಕ್ರಮವಾಗಿ ಡ್ರಗ್ಸ್ ಸಾಗಾಣಿಕೆ ಮಾಡಲಾಗುತ್ತಿದ್ದು, ನಿಮ್ಮ ವಿರುದ್ಧ ಅಕ್ರಮ ಹಣವರ್ಗ ಪ್ರಕರಣ ದಾಖಲಾಗಿದೆ. 

ಬೆಂಗಳೂರು: ವಿಡಿಯೋ ಇದೆ ಎಂದು ಪೊಲೀಸ್, ಪತ್ರಕರ್ತನ ಹೆಸರಲ್ಲಿ ಹಣ ಸುಲಿಗೆ

ವಿಶೇಷ ತನಿಖಾ ತಂಡ (ಎಸ್‌ಐಟಿ)ಗಳನ್ನು ರಚಿಸಲಾಗಿದೆ. ಫೆಡೆಕ್ಸ್ ಕೊರಿಯರ್, ಉದ್ಯೋಗ, ಸುಲಿಗೆ ಮತ್ತು ಆಧಾರ್ ಕಾರ್ಡ್ ದುರ್ಬಳಕೆ ಹೀಗೆ ಹಣ ದೋಚುವ ಜಾಲಗಳನ್ನು ಈ ನಾಲ್ಕು ಎಸ್‌ಐಟಿಗಳು ಪ್ರತ್ಯೇಕವಾಗಿ ಶೋಧಿಸುತ್ತಿವೆ. ಈ ಪೈಕಿಫೆಡೆಕ್ಸ್ ಕೊರಿಯರ್‌ಪ್ರಕರಣ ಸಂಬಂಧ ಪಶ್ಚಿಮ ವಿಭಾಗ (ಸಂಚಾರ)ದ ಡಿಸಿಪಿ ಕುಲದೀಪ್ ಕುಮಾರ್‌ ಜೈನ್ ನೇತೃತ್ವದ ತಂಡತನಿಖೆ ನಡೆಸಿ 14 ಆರೋಪಿಗಳನ್ನು ಬಂಧಿಸಿದೆ ಎಂದು ಆಯುಕ್ತರು ವಿವರಿಸಿದರು.

ಕಳೆದ ವರ್ಷ ಫೆಡೆಕ್ ಕೊರಿಯರ್‌ವಂಚನೆ ಸಂಬಂಧ ನಗರದ ವಿವಿಧ ಠಾಣೆಗಳಲ್ಲಿ 324 ಪ್ರಕರಣಗಳುದಾಖಲಾಗಿದ್ದವು. ಈಗತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳನ್ನು ಎಸ್‌ಐಟಿ ಪತ್ತೆ ಹಚ್ಚುವಲ್ಲಿ ಯಶಸ್ಸು ಕಂಡಿದೆ. 

ನಿಮ್ಮ ಹೆಸರಿಗೆ ಡ್ರಗ್ಸ್‌ ಬಂದಿದೆ ಎಂದು ಹೆದರಿಸಿ ₹1.8 ಕೋಟಿ ಸುಲಿಗೆ, 8 ಜನರ ಬಂಧನ

ಖಾತೆಗಳ ತೆರೆಯಲು ವಿದ್ಯಾರ್ಥಿಗಳ ನೆರವು

ಈ ಬಂಧಿತರ ಪೈಕಿ ಕೆಲವರು ವಿದ್ಯಾರ್ಥಿಗಳಾಗಿದ್ದಾರೆ. ಹಣದಾಸೆಗೆ ವಂಚನೆ ಕೃತ್ಯದಲ್ಲಿ ಕೈ ಜೋಡಿಸಿದ್ದಾರೆ. ವಂಚನೆ ಕೃತ್ಯದ ಹಣ ವರ್ಗಾವಣೆಗೆ ಆರೋಪಿಗಳು ನೆರವು ನೀಡಿದ್ದಾರೆ. ತಮ್ಮ ಹೆಸರುಗಳಲ್ಲಿ ವಿವಿಧ ಬ್ಯಾಂಕ್‌ಗಳಲ್ಲಿ ಖಾತೆಗಳನ್ನು ತೆರೆದು ಹಣ ವರ್ಗಾವಣೆಗೆ ಮಾಡುತ್ತಿದ್ದರು. ಇದಕ್ಕಾಗಿ ಅವರಿಗೆ ಕಮಿಷನ್ ಸಹ ಸಿಕ್ಕಿದೆ. ಬೆಂಗಳೂರು ಸೇರಿ ದೇಶ ವ್ಯಾಪ್ತಿ ನಡೆದಿರುವ 546 ಪ್ರಕರಣಗಳಲ್ಲಿ ಹಣ ವರ್ಗಾವಣೆಗೆ ಈ ಆರೋಪಿಗಳ ಖಾತೆಗಳು ಬಳಕೆಯಾಗಿವೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ. ಆರೋಪಿಗಳಿಗೆ ಸಂಬಂಧಿಸಿದ ಬ್ಯಾಂಕ್ ಖಾತೆ ಸೀಜ್ ಮಾಡಲಾಗಿದೆ. ಈ ಖಾತೆಗಳಲ್ಲಿ 2.10 ಕೋಟಿ ಹಣ ವಹಿವಾಟು ನಡೆದಿದೆ. ಇದರಲ್ಲಿ ಇದ್ದ ಕ 25 ಲಕ್ಷವನ್ನು ಜಪ್ತಿ ಮಾಡಲಾಗಿದೆ. ಜಾಲದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಗಳಿಗೆ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದರು.

ಕೆಲ ದಿನಗಳ ಹಿಂದೆ ಫೆಡೆಕ್ಸ್ ಕೊರಿಯರ್ ವಂಚನೆ ಸಂಬಂಧ ದಾವಣೆಗೆರೆ ತಂಡವನ್ನು ಉತ್ತರ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದರು. ಈಗ ವಂಚಕರ ಮತ್ತೊಂದು ತಂಡವನ್ನು ಎಸ್‌ಐಟಿ ಬೇಟೆಯಾಡಿದೆ.