ಸಂತೋಷ ಪದ್ಮನ್ನವರ ಬೆಳಗಾವಿಯಲ್ಲಿ ಬಡ್ಡಿ ವ್ಯವಹಾರ, ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡ್ತಿದ್ದರು. ಸಂತೋಷ ಪದ್ಮನ್ನವರ ಅಕ್ಟೋಬರ್ 9 ರಂದು ಸಾವನ್ನಪ್ಪಿದ್ದರು. ತಂದೆಯ ಸಾವಿನ ಬಗ್ಗೆ ಪುತ್ರಿ ಸಂಜನಾ ಅನುಮಾನ ವ್ಯಕ್ತಪಡಿಸಿದ್ದರು.  

ಬೆಳಗಾವಿ(ಅ.17): ಉದ್ಯಮಿ ಸಂತೋಷ ‌ಪದ್ಮನ್ನವರ ಕೊಲೆ ಪ್ರಕರಣದ ಆರೋಪಿಗಳನ್ನ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಮೂವರನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಮೂವರನ್ನೂ ಮಾಳಮಾರುತಿ ಠಾಣೆ ಪೊಲೀಸರು ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಂತೋಷ ಪದ್ಮನ್ನವರ ಬೆಳಗಾವಿಯಲ್ಲಿ ಬಡ್ಡಿ ವ್ಯವಹಾರ, ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡ್ತಿದ್ದರು. ಸಂತೋಷ ಪದ್ಮನ್ನವರ ಅಕ್ಟೋಬರ್ 9 ರಂದು ಸಾವನ್ನಪ್ಪಿದ್ದರು. ತಂದೆಯ ಸಾವಿನ ಬಗ್ಗೆ ಪುತ್ರಿ ಸಂಜನಾ ಅನುಮಾನ ವ್ಯಕ್ತಪಡಿಸಿದ್ದರು. 

ಪ್ರಕರಣದ ಆರೋಪಿಗಳಾದ ಸಂತೋಷ ‌ಪತ್ನಿ ಉಮಾ ಪದ್ಮನ್ನವರ, ಶೋಭಿತ್‌ಗೌಡ, ಪವನ್ ಹಿಂಡಲಗಾ ಜೈಲಿಗೆ ರವಾನೆ ಮಾಡಲಾಗಿದೆ. ಮಂಗಳೂರಲ್ಲಿ ತಲೆ ಮರೆಸಿಕೊಂಡಿದ್ದ ಶೋಭಿತ್‌ಗೌಡ, ಪವನ್‌ನನ್ನ ಬೆಳಗಾವಿ ಮಾಳಮಾರುತಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದರು. ಇಡೀ ದಿನ ವಿಚಾರಣೆ ನಡೆಸಿದ ಬಳಿಕ ಪೊಲೀಸರು ಮೂವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.