ಬಾಲ್ಯ ವಿವಾಹ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಈ ಘಟನೆ  ಸ್ಪಷ್ಟ ನಿದರ್ಶನವಾಗಿದೆ. ಬಾಲಕಿಯ ತಂದೆ ತಾಯಿಗೆ ಮಾಹಿತಿಯನ್ನೇ ತಿಳಿಸದೆ ಆಕೆಯ ದೊಡ್ಡಪ್ಪ ಹಾಗೂ ದೊಡ್ಡಮ್ಮ ಯುವಕನ ಜೊತೆ ಮದುವೆ  ಮಾಡಿಸಿರುವ ಘಟನೆ ನಡೆದಿದೆ.

ಬೆಂಗಳೂರು (ಫೆ.17): ಬೆಂಗಳೂರಿನಲ್ಲಿ ಬಾಲ್ಯ ವಿವಾಹ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಈ ಘಟನೆ ಸ್ಪಷ್ಟ ನಿದರ್ಶನವಾಗಿದೆ. ಬಾಲಕಿಯ ತಂದೆ ತಾಯಿಗೆ ಮಾಹಿತಿಯನ್ನೇ ತಿಳಿಸದೆ ಆಕೆಯ ದೊಡ್ಡಪ್ಪ ಹಾಗೂ ದೊಡ್ಡಮ್ಮ ಯುವಕನ ಜೊತೆ ಮದುವೆ ಮಾಡಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಸರ್ಜಾಪುರದಲ್ಲಿ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದ್ದು, ಸ್ವತಃ ಬಾಲಕಿ ತಾಯಿ ಈ ಬಗ್ಗೆ ಸರ್ಜಾಪುರ ಠಾಣೆಗೆ ದೂರು ನೀಡಿದ್ದಾರೆ. 

Add Asianetnews Kannada as a Preferred SourcegooglePreferred

ಯುವತಿ ಎಂಟನೇ ತರಗತಿಯಲ್ಲಿ ಓದುತ್ತಿದ್ದು, ಈಗ ಆಕೆಗೆ 14 ವರ್ಷವಾಗಿದೆ. ಯುವಕನಿಗೆ 24 ವರ್ಷವಾಗಿದೆ. ದೂರುದಾರ ಮಹಿಳೆಯ ಅತ್ತೆ , ಭಾವ, ಭಾವನ ಪತ್ನಿ ವಿರುದ್ದ ದೂರು ದಾಖಲು ಮಾಡಲಾಗಿದೆ. ಇದೇ ತಿಂಗಳು 15 ರಂದು ಯುವತಿಯ ಅಜ್ಜಿ, ದೊಡ್ಡಪ್ಪ-ದೊಡ್ಡಮ್ಮ ತಂದೆ-ತಾಯಿಯಾಗಿರುವ ನಮಗೆ ಗೊತ್ತೇ ಇಲ್ಲದೆ ಮದುವೆ ಮಾಡಿಸಿದ್ದಾರೆಂದು ಯುವತಿಯ ತಾಯಿ ಸರ್ಜಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಯುಎಇನಿಂದ ಭಾರತದ ಅಪರಾಧಿ ನರೇಂದ್ರ ಸಿಂಗ್‌ ಗಡಿಪಾರು

ಮಗಳು ಇನ್ನೂ ಅಪ್ರಾಪ್ತೆಯಾಗಿದ್ದಾಳೆ. ನನ್ನ ಮಗಳನ್ನು ಪುಸಲಾಯಿಸಿ ಮದುವೆ ಮಾಡಿಸಿದ್ದಾರೆ. ಕೈವಾರದಲಿನ ಯಲಮ್ಮ ದೇವಾಲಯದಲ್ಲಿ ತಂದೆ ತಾಯಿಗೆ ಗೊತ್ತಿಲ್ಲದೆ ಮದುವೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಲಸಿನಕಾಯಿಪುರ ಗ್ರಾಮದ ವಿನೋದ್ ಕುಮಾರ್ ಜೊತೆಯಲಿ ಮದುವೆ ಮಾಡಿಸಿದ್ದು, ಮದುವೆಗೆ ವಿನೋದ್ ಕುಮಾರ್ ತಂದೆ ಮುನಿಯಪ್ಪ, ತಾಯಿ ರತ್ನಮ್ಮ, ವಿನೋದ್ ಕುಮಾರ್ ಅಣ್ಣ ವಿಜಯ್ ಕುಮಾರ್ ಮತ್ತು ಮುನಿಯಪ್ಪ, ವೆಂಕಟಮ್ಮರವರು ಸೇರಿ ಮದುವೆ ಮಾಡಿದ್ದಾರೆ.

ಶಿವಮೊಗ್ಗ ಹ್ಯೂಂಡಾಯ್‌ ಕಾರ್ ಶೋ ರೂಂನಲ್ಲಿ ಅಗ್ನಿ ಅವಘಡ, 7 ಕಾರು ಭಸ್ಮ!

ನನ್ನ ಮಗಳು ಅಪ್ರಾಪ್ತ ವಯಸ್ಕಳೆಂದು ಗೊತ್ತಿದ್ದರೂ ಸಹ ಬಲತ್ಕಾರದ ಮದುವೆ ಮಾಡಿದ್ದಾರೆ. ಕಾನೂನು ಬಾಹಿರವಾಗಿ ಮದುವೆ ಮಾಡಿದ್ದು, ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.