Asianet Suvarna News Asianet Suvarna News

ಶಿವಮೊಗ್ಗ: ಪ್ರೀತ್ಸೆ ಅಂತ ಪ್ರಾಣ ತಿಂದ ಯುವಕ, ಯುವತಿ ಆತ್ಮಹತ್ಯೆ

ತ್ಯಾಗರಾಜ್ ಎಂಬ ಯುವಕ ಪ್ರೀತಿಸು ಅಂತ ಯುವತಿಗೆ ಕಾಟ ಕೊಡುತ್ತಿದ್ದನಂತೆ. ಯುವಕನ ಪ್ರೀತಿ ನಿರಾಕರಿಸಿದ ಅಪ್ರಾಪ್ತ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. 

14 Year Old Minor Girl Committed Self Death in Shivamogga grg
Author
First Published Feb 25, 2024, 9:02 PM IST

ಶಿವಮೊಗ್ಗ(ಫೆ.25):  ಪ್ರೀತಿಯ ಕಾಟಕ್ಕೆ ಬೇಸತ್ತು ಅಪ್ರಾಪ್ತ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿ ಇಂದು(ಭಾನುವಾರ) ನಡೆದಿದೆ. ನೇಹಾ(14)(ಹೆಸರು ಬದಲಾಯಿಸಲಾಗಿದೆ) ಎಂಬ ಯುವತಿಯೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ. 

ತ್ಯಾಗರಾಜ್(23) ಎಂಬ ಯುವಕ ಪ್ರೀತಿಸು ಅಂತ ಯುವತಿಗೆ ಕಾಟ ಕೊಡುತ್ತಿದ್ದನಂತೆ. ಯುವಕನ ಪ್ರೀತಿ ನಿರಾಕರಿಸಿದ ಅಪ್ರಾಪ್ತ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಯುವಕ ತ್ಯಾಗರಾಜ್ ಸುಮಾರು ದಿನಗಳಿಂದ ಪ್ರೀತಿಸುವಂತೆ ಯುವತಿಗೆ ಟಾರ್ಚರ್ ಕೊಡುತ್ತಿದ್ದ. 

ಬೇರೆ ಹುಡುಗಿ ಜೊತೆ ಗಂಡನ ಮದುವೆ, ಮನನೊಂದು ಮಹಿಳೆ ಆತ್ಮಹತ್ಯೆ: ನ್ಯಾಯಕ್ಕಾಗಿ ಕುಟುಂಬಸ್ಥರ ಹೋರಾಟ

ಯುವತಿ ಕುಟುಂಬಸ್ಥರು ಕಳೆದ ಎರಡು ತಿಂಗಳ ಹಿಂದೆ ತ್ಯಾಗರಾಜ್‌ನಿಗೆ ವಾರ್ನಿಂಗ್ ಮಾಡಿದ್ದರು. ಆ ಸಮಯದಲ್ಲಿ ಇನ್ನು ಮುಂದೆ ಹೀಗೆ ಮಾಡುವುದಿಲ್ಲ ಎಂದು ಯುವಕ ಹೇಳಿದ್ದನಂತೆ.  ಮತ್ತೆ ಯುವಕನ ಕಾಟ ಹೆಚ್ಚಾದ ಕಾರಣ ನಿನ್ನೆ ರಾತ್ರಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಯುವಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೃತ ಯುವತಿಯ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Follow Us:
Download App:
  • android
  • ios