ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ 15 ವರ್ಷದ ಬಾಲಕ| ಕಲಬುರಗಿ ನದರದ ಬ್ರಹ್ಮಪುರ ಬಡಾವಣೆಯಲ್ಲಿ ನಡೆದ ಘಟನೆ| ಮೊಬೈಲ್‌ನಲ್ಲಿ ವಿಡಿಯೋ ಗೇಮ್ ಆಡದಂತೆ ಬೈದಿದ್ದ ಪೋಷಕರು|

ಕಲಬುರಗಿ(ಜು.03): ವಿಡಿಯೋ ಗೇಮ್ ಆಡಬೇಡ ಎಂದು ಪೋಷಕರು ಬೈದಿದ್ದಕ್ಕೆ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ನಿನ್ನೆ(ಗುರುವಾರ) ನಡೆದಿದೆ. 
ರಾಹುಲ್ ಸೊಲ್ಲಾಪುರ(15) ಎಂಬಾತನೇ ಆತ್ಮಹತ್ಯೆಗೆ ಶರಣಾದ ದುರ್ದೈವಿ ಬಾಲಕನಾಗಿದ್ದಾನೆ. 

Add Asianetnews Kannada as a Preferred SourcegooglePreferred

ಕಳೆದ ರಾತ್ರಿ ತಮ್ಮ ಮನೆಯಲ್ಲಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುರುವಾರ ಸಂಜೆ ಮೊಬೈಲ್‌ನಲ್ಲಿ ವಿಡಿಯೋ ಗೇಮ್ ಆಡದಂತೆ ಪೋಷಕರು ಬೈದಿದ್ದರು ಎಂದು ಹೇಳಲಾಗುತ್ತಿದೆ.

ಪೊಲೀಸರು ಬೈಕ್ ಸೀಜ್ ಮಾಡಿದ್ದಕ್ಕೆ ಬಾಲಕ ಆತ್ಮಹತ್ಯೆ

ಈ ಸಂಬಂಧ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.