Muzaffarnagar: ಪ್ರ್ಯಾಕ್ಟಿಕಲ್ ನೆಪ, 17 ಬಾಲಕಿಯರಿಗೆ ನಶೆ ಪದಾರ್ಥ ನೀಡಿ ರೇಪ್ ಯತ್ನ, ಶಾಲಾ ಮ್ಯಾನೇಜರ್ ಅರೆಸ್ಟ್!
* ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ಶಾಕಿಂಗ್ ಘಟನೆ
* ಅಮಲು ಪದಾರ್ಥ ನೀಡಿ ಹದಿನೇಳು ವಿದ್ಯಾರ್ಥಿನಿಯರ ಅತ್ಯಾಚಾರಕ್ಕೆ ಯತ್ನ
* ಎರಡು ಶಾಲೆಗಳು ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು
ಲಕ್ನೋ(ಡಿ.07): ಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲೆಯ ಎರಡು (Muzaffarnagar District, Uttar Pradesh) ಖಾಸಗಿ ಶಾಲೆಗಳ ಮ್ಯಾನೇಜರ್ಗಳ ವಿರುದ್ಧ 17 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ (Sexual Harassment) ಎಸಗಿದ್ದಾರೆ ಮತ್ತು ಮಾದಕ ದ್ರವ್ಯ ನೀಡಿ ಅತ್ಯಾಚಾರಕ್ಕೆ (Rape) ಯತ್ನಿಸಿದ್ದಾರೆ ಎಂಬ ಆರೋಪ ಕೆಳಿ ಬಂದಿದೆ. ಈ ಸಂಬಂಧ ಪೊಲೀಸರು ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರೊಂದಿಗೆ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕೆ ಪೊಲೀಸ್ ಅಧಿಕಾರಿಯೊಬ್ಬರನ್ನು (Police Officer) ತರಾಟೆಗೆ ತೆಗೆದುಕೊಂಡಿದ್ದಾರೆ.
ಭಾರತೀಯ ಜನತಾ ಪಕ್ಷದ (BJP Leader) ಮುಖಂಡ ಮತ್ತು ಸ್ಥಳೀಯ ಶಾಸಕ ಪ್ರಮೋದ್ ಉತ್ವಾಲ್ ಅವರ ಮಧ್ಯಸ್ಥಿಕೆಯ ನಂತರ, ಕುಟುಂಬದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಮುಜಾಫರ್ನಗರ ಜಿಲ್ಲಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಯಾದವ್ ಸೋಮವಾರ ಹೇಳಿದ್ದಾರೆ. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಪುರ್ಕಾಜಿ ಪೊಲೀಸ್ ಠಾಣೆಯ ಉಸ್ತುವಾರಿ ವಿನೋದ್ ಕುಮಾರ್ ಸಿಂಗ್ ಅವರನ್ನು ತನಿಖೆಗೊಳಪಡಿಸಲಾಗಿದೆ ಎಂದು ಅವರು ಹೇಳಿದರು. ಅದೇ ಸಮಯದಲ್ಲಿ, ಭೋಪಾ ಪೊಲೀಸ್ ಠಾಣೆಯಲ್ಲಿರುವ ಸೂರ್ಯ ದೇವ್ ಪಬ್ಲಿಕ್ ಸ್ಕೂಲ್ನ ನಿರ್ವಾಹಕ ಯೋಗೇಶ್ ಕುಮಾರ್ ಚೌಹಾಣ್ ಮತ್ತು ಪುರ್ಕಾಜಿ ಪ್ರದೇಶದ ಜಿಜಿಎಸ್ ಇಂಟರ್ನ್ಯಾಷನಲ್ ಸ್ಕೂಲ್ನ ನಿರ್ವಾಹಕ ಅರ್ಜುನ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಮಾದಕ ದ್ರವ್ಯಗಳನ್ನು ನೀಡಿದ ಸೆಕ್ಷನ್ ಹಾಗೂ POCSO ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
UP Crime: 2 ದಿನದಿಂದ ನಾಪತ್ತೆಯಾಗಿದ್ದ ಬಾಲಕಿ ಶವ ನೆರೆಮನೆಯಲ್ಲಿದ್ದ ಪೆಟ್ಟಿಗೆಯಲ್ಲಿ ಪತ್ತೆ!
ಪ್ರ್ಯಾಕ್ಟಿಕಲ್ ಎಕ್ಸಾಂ ಎಂದು ಹೆಣ್ಮಕ್ಕಳನ್ನು ಬೇರೆ ಶಾಲೆಗೆ ಕರೆದೊಯ್ದಿದ್ದ ಮ್ಯಾನೇಜರ್
ಯೋಗೇಶ್ ಅವರು ಸೂರ್ಯ ದೇವ್ ಪಬ್ಲಿಕ್ ಶಾಲೆಯಲ್ಲಿ ಓದುತ್ತಿರುವ 17 ಹುಡುಗಿಯರನ್ನು ಪ್ರಾಯೋಗಿಕ ಪರೀಕ್ಷೆಗಾಗಿ ಜಿಜಿಎಸ್ ಶಾಲೆಗೆ ಕರೆದೊಯ್ದ ಸಂದರ್ಭ ಈ ಘಟನೆ ನಡೆದಿದೆ ಎಂದು ಯಾದವ್ ಹೇಳಿದರು. ಅಲ್ಲದೇ ಅವರು ರಾತ್ರಿಯಿಡೀ ಅಲ್ಲಿಯೇ ಇರಬೇಕಾಯಿತು. ಸಂತ್ರಸ್ತರ ಸಂಬಂಧಿಕರ ದೂರಿನ ಪ್ರಕಾರ, ಆರೋಪಿಗಳಿಬ್ಬರೂ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ಮಾದಕ ದ್ರವ್ಯ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಘಟನೆಯ ಬಗ್ಗೆ ಯಾರಿಗೂ ಹೇಳದಂತೆ ಆರೋಪಿಗಳು ಹುಡುಗಿಯರಿಗೆ ಬೆದರಿಕೆ ಹಾಕಿದ್ದಾರೆ ಎಂದು ಕುಟುಂಬದ ಸದಸ್ಯರು ದೂರಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಯಾದವ್ ಹೇಳಿದ್ದಾರೆ. ಕುಟುಂಬದವರ ಪ್ರಕಾರ, ಅವರು ಸ್ಥಳೀಯ ಪೊಲೀಸರಿಗೆ ತಿಳಿಸಿದಾಗ ಅವರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ, ನಂತರ ಅವರು ಶಾಸಕರನ್ನು ಸಂಪರ್ಕಿಸಿದರು.
Shocking News of Pregnancy: ಬದಲಾದ ಭಾರತದಲ್ಲಿ 15ರ ಹರೆಯದಲ್ಲೇ ಹೆಚ್ಚಾಗ್ತಿದೆ ಗರ್ಭಧಾರಣೆ!
ಶಾಲಾ ಆಡಳಿತದ ಇಬ್ಬರು ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 328 (ಅಪರಾಧ ಮಾಡುವ ಉದ್ದೇಶದಿಂದ ವಿಷದ ಮೂಲಕ ಹಾನಿಯನ್ನುಂಟುಮಾಡುವುದು), 354 (ಮಹಿಳೆಯರ ಘನತೆಗೆ ಚ್ಯುತಿ ತರುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಶಕ್ತಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಎಸ್ಪಿ ತಿಳಿಸಿದ್ದಾರೆ. ಲೈಂಗಿಕ ದೌರ್ಜನ್ಯ, ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ) ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.