ಯಲ್ಲಾಲಿಂಗ ಮಠದ ಆವರಣದಲ್ಲಿ ಗಾಂಜಾ ಪತ್ತೆ| ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿರುವ ಮಠ| ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳ ದಾಳಿ| 19 ಕೆ.ಜಿಯಷ್ಟು ಗಾಂಜಾ ವಶ| 

ವಿಜಯಪುರ(ನ.28): ಮಠದ ಆವರಣದಲ್ಲೇ ಬೆಳೆದಿದ್ದ 13 ಗಾಂಜಾ ಗಿಡಗಳನ್ನ ಪೊಲೀಸರು ವಶಪಡಿಸಿಕೊಂಡ ಘಟನೆ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ನಿನ್ನೆ(ಶುಕ್ರವಾರ) ನಡೆದಿದೆ. ದಾಳಿ ವೇಳೆ 19 ಕೆ.ಜಿಯಷ್ಟು ಗಾಂಜಾ ವಶಪಡಿಸಿಕೊಳ್ಳಲಾಗಿದೆ. 

Add Asianetnews Kannada as a Preferred SourcegooglePreferred

ಬಸವನ ಬಾಗೇವಾಡಿನ ಪಟ್ಟಣದಲ್ಲಿರುವ ಯಲ್ಲಾಲಿಂಗ ಮಠದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನ ಬೆಳೆಯಲಾಗಿದೆ ಎಂದು ದೂರುಗಳು ಬಂದಿದ್ದವು. ಹೀಗಾಗಿ ಖಚಿತ ಮಾಹಿತಿ ಮೇರೆಗೆ ಶುಕ್ರವಾರ ತಡರಾತ್ರಿ ವಿಜಯಪುರ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದರು. 

ಹೊಸಪೇಟೆ: ದೀಪಾವಳಿ ಹಬ್ಬದಂದೇ ಭರ್ಜರಿ ಕಾರ್ಯಾಚರಣೆ, 7 ಲಕ್ಷ ಮೌಲ್ಯದ ಗಾಂಜಾ ಜಪ್ತಿ

ದಾಳಿ ವೇಳೆ ಅಕ್ರಮವಾಗಿ ಬೆಳದಿದ್ದ ಗಾಂಜಾ ಗಿಡಗಳನ್ನ ಕಿತ್ತು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಠಕ್ಕೆ ಬರುವ ಸಾಧು-ಬೈರಾಗಿಗಳು ಧ್ಯಾನ ಏಕಾಗ್ರತೆಗೆಂದು ಗಾಂಜಾ ಸೇವಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.