ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. 

ಬೆಂಗಳೂರು(ಮೇ.27): ಪಿಜಿಯಲ್ಲಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು(ಶನಿವಾರ) ನಡೆದಿದೆ. ಬೀದರ್ ಮೂಲದ ಅಭಿಷೇಕ್(19) ಎಂಬಾತನೇ ಮೃತ ದುರ್ದೈವಿಯಾಗಿದ್ದಾರೆ.

Add Asianetnews Kannada as a Preferred SourcegooglePreferred

ವಿಜಯನಗರದ ಮಾರೇನಹಳ್ಳಿಯ ಪಿಜಿಯಲ್ಲಿದ್ದ ತನ್ನ ರೂಮಿನಲ್ಲಿ ಪ್ಯಾನಿಗೆ ನೇಣುಬಿಗಿದುಕೊಂಡು ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಏಳು ದಿನಗಳ ಹಿಂದೆ ಕಾಣೆಯಾಗಿದ್ದ ಕೃಷಿಕ; ಅರಣ್ಯಪ್ರದೇಶದಲ್ಲಿ ಮೃತದೇಹ ಪತ್ತೆ!

ಮೃತ ಅಭಿಷೇಕ್ ವಿದ್ಯಾಭ್ಯಾಸದ ಸಲುವಾಗಿ ಪಿಜಿಯಲ್ಲಿ ತಂಗಿದ್ದನಂತೆ. ಅಭಿಷೇಕ್ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆಯಿಂದಷ್ಟೇ ಅಭಿಷೇಕ್ ಸಾವಿಗೆ ಕಾರಣ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.