Suicide Cases: ಲವ್ ಬ್ರೇಕಪ್ಗೆ ನೊಂದು ಯುವತಿ ಆತ್ಮಹತ್ಯೆ
* ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ
* ಪ್ರಿಯಕರ ನಾಗರಾಜು ಬಂಧಿನ
* ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ನಾಗರಾಜು ಮತ್ತು ಚಂದನಾ
ಬೆಂಗಳೂರು(ಜ.24): ಪ್ರೀತಿಯಲ್ಲಿ ಬಿರುಕು(Love Breakup) ಮೂಡಿದ್ದರಿಂದ ಮನನೊಂದು ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಜುನಾಥನಗರ ನಿವಾಸಿ ಚಂದನಾ(23) ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಆಕೆಯ ಪ್ರಿಯಕರ ನಾಗರಾಜು(23) ಎಂಬಾತನನ್ನು ಬಂಧಿಸಲಾಗಿದೆ(Arrest) ಎಂದು ಪೊಲೀಸರು(Police) ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ನಾಗರಾಜು ಮತ್ತು ಚಂದನಾ ಬಾಗಲಗುಂಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾಬ್ ಸಂಗ್ರಹ ಮಾಡುವ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಕೆಲ ತಿಂಗಳ ಹಿಂದೆ ಪ್ರೀತಿಯಲ್ಲಿ(Love) ಬಿರುಕು ಉಂಟಾಗಿದ್ದು, ನಾಗರಾಜನು ಚಂದನಾಳೊಂದಿಗೆ ಮಾತು ಬಿಟ್ಟಿದ್ದ ಎನ್ನಲಾಗಿದೆ. ಇದರಿಂದ ಮನನೊಂದ ಚಂದನಾ ಶನಿವಾರ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ಚಂದನಾ ಪೋಷಕರು ನೀಡಿದ ದೂರಿನ ಮೇರೆಗೆ ನಾಗರಾಜುನನ್ನುಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya: ತಂದೆ-ಮಗನ ಆತ್ಮಹತ್ಯೆ ಕೇಸ್ಗೆ ಟ್ವಿಸ್ಟ್, ಪತ್ನಿಯ ಅಕ್ರಮ ಸಂಬಂಧ ಕಾರಣ.?
ಸಾರಿಗೆ ಕಚೇರಿಯಲ್ಲೆ ಸಿಬ್ಬಂದಿ ಆತ್ಮಹತ್ಯೆ
ಹುಬ್ಬಳ್ಳಿ(Hubballi): ಸಾರಿಗೆ ಸಂಸ್ಥೆಯ ಮಹಿಳಾ ಸಿಬ್ಬಂದಿ ಸುಜಾತಾ ವೀರಪ್ಪ ಅಂಚೇರ (42) ಡೆತ್ನೋಟ್(Deathnote) ಬರೆದಿಟ್ಟು ಗೋಕುಲ ರಸ್ತೆ ಕಚೇರಿ ಆವರಣದ ಕಟ್ಟಡದಲ್ಲಿಯೇ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಸಾರಿಗೆ ಸಂಸ್ಥೆಯಲ್ಲಿ ಜ್ಯೂನಿಯರ್ ಅಸಿಸ್ಟಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ಭಾನುವಾರ ಗೋಕುಲ್ ರಸ್ತೆಯಲ್ಲಿರುವ ಕಚೇರಿಗೆ ಹಾಜರಾಗಿದ್ದರು. ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಕೆಲ ಗಂಟೆಗಳಾದರೂ ಕರ್ತವ್ಯಕ್ಕೆ ಹಾಜರಾಗಲಿಲ್ಲ. ಈ ಹಿನ್ನೆಲೆಯಲ್ಲಿ ಆವರಣದಲ್ಲಿ ತಡಕಾಡಿದ್ದಾರೆ. ಆದರೆ, ಅದಾಗಲೇ ಮಹಿಳೆ(Woman) ಕಟ್ಟಡ ಕೋಣೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತಕ್ಷಣವೇ ಪತಿ ವೀರಪ್ಪ ಹಾಗೂ ಪೊಲೀಸರಿಗೆ ಸಾರಿಗೆ ಸಂಸ್ಥೆ ಸಿಬ್ಬಂದಿ ಮಾಹಿತಿ ನೀಡಿದ್ದರು. ಬಳಿಕ ಪೊಲೀಸರು ಘಟನಾ ಸ್ಥಳ ಪರಿಶೀಲನೆ ವೇಳೆಯಲ್ಲಿ ಮಹಿಳೆ ಬಳಿ ಡೆತ್ನೋಟ್ ದೊರೆತಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬರು(SSL Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ರಾತ್ರಿ ಕೆ.ಪಿ.ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚೆಲುವಪ್ಪ ಗಾರ್ಡನ್ ನಿವಾಸಿ ರಾಜು ಮತ್ತು ಜಯಂತಿ ದಂಪತಿ ದ್ವಿತೀಯ ಪುತ್ರಿ ಪೂಜಾ(16) ಮೃತ ವಿದ್ಯಾರ್ಥಿನಿ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಮರಣಪತ್ರ ಪತ್ತೆಯಾಗಿಲ್ಲ. ತನಿಖೆ ಮುಂದುವರಿದೆ ಎಂದು ಪೊಲೀಸರು ತಿಳಿಸಿದ್ದಾರೆ
ರಾಜು ಭದ್ರತಾ ಸಿಬ್ಬಂದಿಯಾಗಿದ್ದು, ಜಯಂತಿ ಮನೆಯಲ್ಲಿಯೇ ಟೈಲರಿಂಗ್ ವೃತ್ತಿ ಮಾಡುತ್ತಾರೆ. ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದು, ದ್ವಿತೀಯ ಪುತ್ರಿ ಪೂಜಾ ಖಾಸಗಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದಳು. ರಾಜು ದಂಪತಿ ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಮನೆ ಸಮೀಪದ ಸಂಬಂಧಿಕರ ಮನೆಗೆ ಹೋಗಿದ್ದು, 10 ಗಂಟೆಗೆ ವಾಪಾಸಾಗಿದ್ದಾರೆ. ಈ ವೇಳೆ ಮನೆಯ ಕೋಣೆಯಲ್ಲಿ ಪೂಜಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಯಾವ ಕಾರಣಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಪೋಷಕರಿಗೂ ಮಾಹಿತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಕ್ಷಿಣೆ ಕಿರುಕುಳ: ದುಬೈನಿಂದ ಗೃಹಿಣಿ ಆತ್ಮಹತ್ಯೆ
ಬೆಂಗಳೂರು: ವರದಕ್ಷಿಣೆ ಕಿರುಕುಳ ತಳಲಾರದೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತುಮಕೂರು ಮೂಲದ ನುಮ್ರಾಸ್(31) ಆತ್ಮಹತ್ಯೆ ಮಾಡಿಕೊಂಡವರು. ಪೋಷಕರು ನೀಡಿದ ದೂರಿನ ಮೇರೆಗೆ ಆಕೆಯ ಪತಿ ಶಹನಾಬ್ಖಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Suicide Cases: ಸಾಲ ಕೊಟ್ಟವರ ಕಿರುಕುಳ: ಆಟೋ ಚಾಲಕ ಆತ್ಮಹತ್ಯೆ
ಆರು ವರ್ಷಗಳ ಹಿಂದೆ ಶಹನಾಬ್ಖಾನ್ ಮತ್ತು ನುಮ್ರಾಸ್ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿ ಸೌದಿಯಲ್ಲಿ ಕೆಲ ಕಾಲ ನೆಲೆಸಿದ್ದು, ಎರಡು ತಿಂಗಳ ಹಿಂದೆಯಷ್ಟೇ ಭಾರತಕ್ಕೆ(India) ವಾಪಸಾಗಿದ್ದರು. ಕುಟುಂಬ ಸಹಿತ ತುಮಕೂರಿನಲ್ಲಿ ನೆಲೆಸಿದ್ದರು. ಶುಕ್ರವಾರ ಸಂಜೆ ದಂಪತಿ ರಾಜಾಜಿನಗರ ಬಾಷ್ಯಂ ವೃತ್ತದಲ್ಲಿರುವ ಶಹನಾಬ್ ಖಾನ್ ಸಹೋದರಿಯ ಮನೆಗೆ ಬಂದಿದ್ದರು.
ಯಾವುದೋ ವಿಚಾರ ಸಂಬಂಧ ಶನಿವಾರ ದಂಪತಿ ನಡುವೆ ಗಲಾಟೆಯಾಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಆಕೆ ಕೋಣೆಯ ಬಾಗಿಲು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ಬೆಳಗ್ಗೆ ಆತ್ಮಹತ್ಯೆ ಬೆಳಕಿಗೆ ಬಂದಿದೆ. ಆಕೆಯ ಪೋಷಕರು ವರದಕ್ಷಿಣೆ ಕಿರುಕುಳವೇ ಮಗಳ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿ ಅಳಿಯನ ವಿರುದ್ಧ ದೂರು ನೀಡಿದ್ದಾರೆ. ಇದರ ಆಧಾರದ ಮೇಲೆ ಈ ಹಿನ್ನೆಲೆಯಲ್ಲಿ ಶಹನಾಬ್ ಖಾನ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.