ಭಾರೀ ಮಳೆಯಿಂದಾಗಿ ಮೊದಲೇ ಕಾವೇರಿ ನದಿ ತುಂಬಿ ಹರಿಯುತ್ತಿದೆ. ಇದರ ಮಧ್ಯೆ ಮಹಿಳೆಯೊಬ್ಬರು ತುಂಬಿ ಹರಿಯುತ್ತಿರೋ ಕಾವೇರಿ ನದಿಗೆ ಹಾರಿ ಆತ್ಮಹತ್ಯಗೆ  ಯತ್ನಿಸಿದ್ದಾಳೆ.

ಮಂಡ್ಯ, (ಆ.08):  ತುಂಬಿ ಹರಿಯುತ್ತಿರೋ ಕಾವೇರಿ ನದಿಗೆ ಹಾರಿ ತಾಯಿ, ಮಗ ಆತ್ಮಹತ್ಯಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಉತ್ತರ ಕಾವೇರಿ ಸೇತುವೆ ಬಳಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಲಕ್ಷ್ಮಿ ಸಾಗರದ ಮಹಿಳೆ ಅಪೂರ್ವ(24 ) ತನ್ನ ಎರಡೂವರೆ ವರ್ಷದ ಪುತ್ರಿ ಕೀರ್ತನಾ ಜತೆಗೆ ಶ್ರೀರಂಗಪಟ್ಟಣದ ಉತ್ತರ ಕಾವೇರಿ ಸೇತುವೆ ಬಳಿ ನದಿಗೆ ಹಾರಿದ್ದಾಳೆ.

ಕಾವೇರಿ ಕೊಳ್ಳದಲ್ಲಿ ಭಾರೀ ಮಳೆ: KRS ಡ್ಯಾಂ ಬಹುತೇಕ ಭರ್ತಿ, ಸಂತಸದಲ್ಲಿ ರೈತರು..!

ಇದನ್ನು ನೋಡಿದ ಸ್ಥಳೀಯರು ನೀರಿನಲ್ಲಿ ಕೊಚ್ಚಿ ಹೋಗ್ತಿದ್ದ ಅಪೂರ್ವಳನ್ನ ರಕ್ಷಣೆ ಮಾಡಿದ್ದಾರೆ. ಸುಮಾರು 2 ಕಿ.ಮೀ ದೂರ ನದಿಯಲ್ಲಿ ಕೊಚ್ಚಿ ಹೋಗಿದ್ದ ಅಪೂರ್ವಳನ್ನ ಗಂಜಾಮ್ ಕರಿಘಟ್ಟ ಸೇತುವೆ ಬಳಿ ಹಗ್ಗ ಹಾಕಿ ರಕ್ಷಣೆ ಮಾಡಿದ್ದಾರೆ.

ಆದ್ರೆ, ಮಗು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಕೊಚ್ಚಿ ಹೋದ ಮಗುವಿನ ಶವಕ್ಕಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ. ಈ ಬಗ್ಗೆ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ.