ಅಜರ್‌ನ ಪತ್ನಿಗೆ ವಿಜಯ ಕಿರುಕುಳ ನೀಡುತ್ತಿದ್ದನಂತೆ. ಹೀಗಾಗಿ ಆತನ ಮೇಲೆ ಕಲ್ಲು ಎತ್ತಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ಅಜರ್ ಎಂಬಾತ ಒಬ್ಬನೇ ಈ ಕೃತ್ಯವನ್ನು ಎಸಗಿದ್ದಾನೆ. ಆರೋಪಿಯನ್ನು ಆಗಲೇ ಬಂಧಿಸಲಾಗಿದೆ: ಕಮಿಷನರ್ ರೇಣುಕಾ ಸುಕುಮಾರ 

ಹುಬ್ಬಳ್ಳಿ(ಫೆ.04): ಹುಬ್ಬಳ್ಳಿ ನಗರದ ಕಾರವಾರ ರಸ್ತೆಯಲ್ಲಿನ ಎಂಟಿಎಸ್ ಪಾಳುಬಿದ್ದ ಜಾಗೆಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಶವ ಪತ್ತೆಯಾದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಸ್ನೇಹಿತ ಪತ್ನಿಯ ಮೇಲೆ ಕಣ್ಣು ಹಾಕಿದ್ದೇ ಕೊಲೆಗೆ ಕಾರಣ ಎನ್ನುವ ಸತ್ಯ ಬೆಳಕಿಗೆ ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಾರುತಿನಗರದ ವಿಜಯ ಬಸವ (24) ಎಂಬಾತನ ಶವ ಎರಡು ದಿನದ ಹಿಂದೆ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈಶ ಖಾಸಗಿ ಮೊಬೈಲ್ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಮಂಟೂರ ರಸ್ತೆಯ ಆರೋಪಿ. ಅಜರ್ ಎಂಬಾತ ಕೊಲೆ ಮಾಡಿದ ವಿಜಯ ಮತ್ತು ಅಜರ್ ಅತ್ಮೀಯ ಸ್ನೇಹಿತರು, ಅಜರ್‌ನ ಪತ್ನಿಗೆ ವಿಜಯ ಮೇಸೆಜ್ ಹಾಗೂ ಕಾಲ್ ಮಾಡಿ ಕಿರುಕುಳ ನೀಡುತ್ತಿದ್ದನಂತೆ. ಈ ಬಗ್ಗೆ ಅಜರ್‌ನಿಗೆ ಪತ್ನಿ ತಿಳಿಸಿದ್ದಾಳೆ. ಅಜರ್‌ ಒಂದೆರಡು ಬಾರಿ ವಿಜಯಗೆ ಬುದ್ಧಿವಾದ ಹೇಳಿದ್ದಾನೆ. ಆದರೂ ಆತ ಕೇಳಿರಲಿಲ್ಲ. ತನ್ನ ಚಾಳಿಯನ್ನು ಮುಂದುವರಿಸಿದ್ದನಂತೆ. ಹೀಗಾಗಿ. ಈತನಿಗೆ ಪಾಠ ಕಲಿಸಬೇಕೆಂದು ಪಾಳುಬಿದ್ದ ಜಾಗೆಯಲ್ಲಿ ಕರೆಸಿದ್ದಾನೆ. ಆತನೊಂದಿಗೆ ಕುಡಿದಿದ್ದಾನೆ. ಈ ವೇಳೆ ಮತ್ತೊಮ್ಮೆ ಬುದ್ದಿವಾದ ಹೇಳಿದ್ದಾನೆ. ಆಗ ಮಾತಿಗೆ ಮಾತು ಬೆಳೆದುಜಗಳಶುರುವಾಗಿದೆ. ಈ ವೇಳೆ ವಿಜಯನ ಮೇಲೆ ಆಜರ್ ಕಲ್ಲು ಎತ್ತಿಹಾಕಿದ್ದಾನೆ. ಆಗ ಪ್ರಜ್ಞೆ ತಪ್ಪಿದ್ದಾನೆ. ಕೂಡಲೇ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಅಲ್ಲಿಂದ ಪರಾರಿಯಾಗಿದ್ದ.
ಮರುದಿನ ಬೆಳಗ್ಗೆ ಕೊಲೆಯಾದ ಬಗ್ಗೆ ಮಾಹಿತಿ ತಿಳಿದು ಪೊಲೀಸ್ ಕಮಿಷನರೇಟ್, ಎಸಿಪಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿತ್ತು. ಈ ತಂಡ ತನಿಖೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕ್ಯಾಮರಾ ದೃಶ್ಯಾವಳಿ, ಮೊಬೈಲ್ ಕರೆಗಳನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

ಬೆಳಗಾವಿ ಡಬಲ್ ಮರ್ಡರ್: ಮದುವೆಯಾಗಿ 30 ದಿನಕ್ಕೆ ಓಡಿಹೋದ ಹೆಂಡ್ತಿಯನ್ನು ಪ್ರಿಯಕರನೊಂದಿಗೆ ಕೊಲೆಗೈದ ಗಂಡ

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್ ರೇಣುಕಾ ಸುಕುಮಾರ, ಅಜರ್‌ನ ಪತ್ನಿಗೆ ವಿಜಯ ಕಿರುಕುಳ ನೀಡುತ್ತಿದ್ದನಂತೆ. ಹೀಗಾಗಿ ಆತನ ಮೇಲೆ ಕಲ್ಲು ಎತ್ತಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ಅಜರ್ ಎಂಬಾತ ಒಬ್ಬನೇ ಈ ಕೃತ್ಯವನ್ನು ಎಸಗಿದ್ದಾನೆ. ಆರೋಪಿಯನ್ನು ಆಗಲೇ ಬಂಧಿಸಲಾಗಿದೆ ಎಂದು ತಿಳಿಸಿದರು. ಈ ಕುರಿತು ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.