Asianet Suvarna News Asianet Suvarna News

Uttar Pradesh: ಅಗ್ನಿ ಅವಘಡ: ಮೂವರು ಅಪ್ರಾಪ್ತರು ಸೇರಿ ಒಂದೇ ಕುಟುಂಬದ ಐವರ ದುರ್ಮರಣ

ಉತ್ತರ ಪ್ರದೇಶದ ಮೌ ಜಿಲ್ಲೆಯ ಕೋಪಗಂಜ್ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಶಹಪುರ್ ಗ್ರಾಮದಲ್ಲಿ ಮನೆಗೆ ಬೆಂಕಿ ಕಾಣಿಸಿಕೊಂಡಿದ್ದು, ಒಬ್ಬರು ಮಹಿಳೆ, ಒಬ್ಬರು ವಯಸ್ಕರು ಮತ್ತು 3 ಅಪ್ರಾಪ್ತ ವಯಸ್ಕರು ಸೇರಿದಂತೆ ಒಂದೇ ಕುಟುಂಬದ 5 ಸದಸ್ಯರು ಮೃತಪಟ್ಟಿದ್ದಾರೆ.

3 minors among 5 of family killed after fire breaks out in uttar pradesh says cops ash
Author
First Published Dec 28, 2022, 2:59 PM IST

ಉತ್ತರ ಪ್ರದೇಶದ (Uttar Pradesh) ಮೌವಿನ (Mau) ಶಹಪುರ (Shahpur) ಗ್ರಾಮದಲ್ಲಿ ಮನೆಯಲ್ಲಿ ಬೆಂಕಿ (Fire) ಕಾಣಿಸಿಕೊಂಡು ಒಂದೇ ಕುಟುಂಬದ ಐವರು ದಾರುಣವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮಂಗಳವಾರ ಈ ಘಟನೆ ನಡೆದಿದ್ದು, ಮಹಿಳೆ (Lady), ಒಬ್ಬರು ವಯಸ್ಕ ಮತ್ತು 3 ಅಪ್ರಾಪ್ತರು ಸೇರಿದಂತೆ ಕುಟುಂಬದ 5 ಸದಸ್ಯರು (Members) ಬಲಿಯಾಗಿದ್ದಾರೆ. ಮಾಹಿತಿ ಲಭಿಸಿದ ಕೂಡಲೇ ಪರಿಹಾರ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. 

ಉತ್ತರ ಪ್ರದೇಶದ ಮೌ ಜಿಲ್ಲೆಯ ಕೋಪಗಂಜ್ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಶಹಪುರ್ ಗ್ರಾಮದಲ್ಲಿ ಮನೆಗೆ ಬೆಂಕಿ ಕಾಣಿಸಿಕೊಂಡಿದ್ದು, ಒಬ್ಬರು ಮಹಿಳೆ, ಒಬ್ಬರು ವಯಸ್ಕರು ಮತ್ತು 3 ಅಪ್ರಾಪ್ತ ವಯಸ್ಕರು ಸೇರಿದಂತೆ ಒಂದೇ ಕುಟುಂಬದ 5 ಸದಸ್ಯರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳ, ವೈದ್ಯಕೀಯ ಮತ್ತು ಪರಿಹಾರ ತಂಡಗಳೊಂದಿಗೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅರುಣ್ ಕುಮಾರ್ ಸುದ್ದಿಸಂಸ್ಥೆ ಎಎನ್‌ಐ ಮಾಹಿತಿ ನೀಡಿದೆ. 

ಇದನ್ನು ಓದಿ: Andhra Pradesh: ಫಾರ್ಮಾ ಕಂಪನಿ ಲ್ಯಾಬ್‌ನಲ್ಲಿ ಅಗ್ನಿ ಅವಘಡ: ನಾಲ್ವರ ದುರ್ಮರಣ..!

ಸ್ಟೌನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು  ಪ್ರಾಥಮಿಕ ವರದಿಯು ತಿಳಿಸಿದೆ ಎಂದೂ ಅವರು ಹೇಳಿದ್ದಾರೆ. ಅಲ್ಲದೆ, ಮೃತ ವ್ಯಕ್ತಿಗಳಿಗೆ ತಲಾ ₹ 4 ಲಕ್ಷ ನೆರವು ನೀಡುವುದಾಗಿಯೂ ಜಿಲ್ಲಾಧಿಕಾರಿ ಘೋಷಿಸಿದ್ದಾರೆ. 

ಇನ್ನು, ಪ್ರತ್ಯೇಕ ಘಟನೆಯೊಂದರಲ್ಲಿ, ಡಿಸೆಂಬರ್ 11 ರಂದು ವರದಕ್ಷಿಣೆಗೆ ಕಿರುಕುಳ ನೀಡಿದ ಪತಿಯ ಕುಟುಂಬಸ್ಥರು ಸೊಸೆ ಹಾಗೂ ಮಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಘಟನೆಯಲ್ಲಿ 25 ವರ್ಷದ ಮಹಿಳೆ ಮತ್ತು ಆಕೆಯ 3 ವರ್ಷದ ಮಗಳು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಹಿಳೆ 2018 ರಲ್ಲಿ ವಿವಾಹವಾಗಿದ್ದರು ಮತ್ತು ವರದಕ್ಷಿಣೆಗಾಗಿ ಆಕೆಯ ಅತ್ತೆ-ಮಾವಂದಿರು ಕಿರುಕುಳ ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಊರಗೌಡ್ತಿಯ ಶವಸಂಸ್ಕಾರಕ್ಕೆ ಬಂದವರಿಗೆ ಶಾಕ್: ಶವಯಾತ್ರೆ ವೇಳೆ ಸಿಡಿದ ಪಟಾಕಿಯಿಂದ ಭಾರೀ ಅಗ್ನಿ ಅವಘಡ

ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ, ಆದರೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪ್ರಸ್ತುತ ತನಿಖೆ ನಡೆಯುತ್ತಿದೆ ಎಂದೂ ತಿಳಿದುಬಂದಿದೆ. 

ಇನ್ನು, ಈ ದುರಂತದ ಸುದ್ದಿ ಸಮುದಾಯದ ಮೂಲಕ ಆಘಾತ ಸೃಷ್ಟಿ ಮಾಡಿದೆ ಮತ್ತು ಕುಟುಂಬಕ್ಕೆ ಸಾಂತ್ವನ ಹರಿದುಬರುತ್ತಿದೆ. ಇದು ಅಗ್ನಿ ಸುರಕ್ಷತಾ ಕ್ರಮಗಳ ಮಹತ್ವವನ್ನು ನೆನಪಿಸುತ್ತದೆ ಮತ್ತು ಅಂತಹ ದುರಂತಗಳು ಸಂಭವಿಸದಂತೆ ಎಚ್ಚರವಹಿಸುವ ಅವಶ್ಯಕತೆಯಿದೆ.

ಇದನ್ನು ಓದಿ: Secunderabad: ಇ-ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ; 8 ಸಾವು, ಮೇಲಿನ ಮಹಡಿಗಳಿಂದ ಪ್ರಾಣ ಉಳಿಸಿಕೊಳ್ಳಲು ಜಿಗಿದ ಹಲವರು

Follow Us:
Download App:
  • android
  • ios