Asianet Suvarna News Asianet Suvarna News

ಲಾರಿ ಪಲ್ಟಿ: ಮದುವೆಗೆ ಹೊರಟಿದ್ದ ಮೂವರು ಸಾವು, 17ಕ್ಕೂ ಹೆಚ್ಚು ಜನರಿಗೆ ಗಾಯ

ಚಾಲಕ ನಿಯಂತ್ರಣ ತಪ್ಪಿ ಮೈಲು ಗಲ್ಲಿಗೆ ಡಿಕ್ಕಿ ಹೊಡೆದ ದಿಬ್ಬಣದ ಲಾರಿ| ಮೂರು ಜನ ಮಹಿಳೆರು ಸ್ಥಳದಲ್ಲಿಯೇ ಸಾವು| ಚನ್ನಗಿರಿ ತಾಲೂಕಿನ ಮಾವಿಕಟ್ಟೆ ಗ್ರಾಮದ ಬಳಿ ಘಟನೆ.

3 women kills Several people injured after marriage lorry overturns Near Channagiri
Author
Bengaluru, First Published Jan 29, 2020, 9:31 PM IST

ದಾವಣಗೆರೆ, [ಜ.29]: ಮದುವೆಗೆ ಹೊರಟಿದ್ದ ಕ್ಯಾಂಟರ್ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಮಹಿಳೆಯರು ಮೃತಪಟ್ಟಿದ್ದು, 17ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ದುರ್ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ಮತ್ತು ಹಂಚಿನಸಿದ್ದಾಪುರದ ಮಧ್ಯೆ ಘಡನೆ ನಡೆದಿದೆ. ಆಂಧ್ರಪ್ರದೇಶದ ಹಿಂದುಪುರದ ನಾಗರತ್ನಮ್ಮ (70), ಶಿವಮೊಗ್ಗದ ವರಲಕ್ಷ್ಮೀ (60), ಅನುಷಾ (25) ಮೃತಪಟ್ಟ ದುರ್ದೈವಿಗಳು.

ಬೆಂಕಿ ಹಚ್ಚಿದ ಪ್ರಿಯತಮೆ, ಫಲಿಸದ ಚಿಕಿತ್ಸೆ : ಕೊನೆಯುಸಿರೆಳೆದ ಯುವಕ

ಆಂಧ್ರಪ್ರದೇಶದ ಹಿಂದುಪುರದಿಂದ ಶಿವಮೊಗ್ಗಕ್ಕೆ ಮದುವೆ ದಿಬ್ಬಣ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮೈಲುಗಲ್ಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಈ ದುರಂತ ಸಂಭವಿಒಸಿದೆ. 

ಘಟನಾ ಸ್ಥಳಕ್ಕೆ ಚನ್ನಗಿರಿ ಪೊಲೀಸರ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಶವಗಳನ್ನು ಚನ್ನಗಿರಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Follow Us:
Download App:
  • android
  • ios