* ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆನೆಗದ್ದೆ ಗ್ರಾಮದಲ್ಲಿ ನಡೆದ ಘಟನೆ*  ಅತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ* ಈ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಶಿವಮೊಗ್ಗ(ಜೂ.05): 35 ವರ್ಷದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ಇಂದು(ಶನಿವಾರ) ನಡೆದಿದೆ.

Add Asianetnews Kannada as a Preferred SourcegooglePreferred

ಮೂಲತಃ ಆನೆಗದ್ದೆ ಗ್ರಾಮದ ಮೃತ ಮಹಿಳೆ ಬೆಂಗಳೂರಿನಲ್ಲಿ ನೆಲೆಸಿದ್ದರು. 13 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಈಕೆ ಇತ್ತೀಚೆಗೆ ಗಂಡನನ್ನು ತೊರೆದಿದ್ದಳು. ಇವರಿಗೆ 6 ವರ್ಷದ ಮಗುವಿದೆ ಎಂದು ತಿಳಿದು ಬಂದಿದೆ. 

ಚಾಮರಾಜನಗರ : ಒಂದೇ ಕುಟುಂಬದ ನಾಲ್ವರೂ ಅತ್ಮಹತ್ಯೆಗೆ ಶರಣು

ಕೊರೋನಾ ಹಿನ್ನಲೆಯಲ್ಲಿ ಊರಿಗೆ ಬಂದು ತಾಯಿ, ತಂಗಿ ಮತ್ತು ಓರ್ವ ಮಗಳ ಜೊತೆ ನೆಲೆಸಿದ್ದಳು. ಮೃತ ಅತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೃತ ಮಹಿಳೆ ಮದ್ಯ ವ್ಯಸನಿಯಾಗಿದ್ದಳು ಎನ್ನಲಾಗಿದೆ. ಈ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.