Asianet Suvarna News Asianet Suvarna News

ಪತ್ನಿ, ಮಗನನ್ನು ಕೊಂದು ಸಾವಿಗೆ ಶರಣಾದ ಟೆಕ್ಕಿ

ಪತ್ನಿ ಹಾಗೂ 8 ವರ್ಷದ ಮಗನನ್ನು ಕೊಂದು ಟೆಕ್ಕಿಯೊಬ್ಬ ಸಾವಿಗೆ ಶರಣಾದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

44 year old pune techie killed wife and son and later kill self by hanging akb
Author
First Published Mar 16, 2023, 10:36 AM IST | Last Updated Mar 16, 2023, 10:36 AM IST

ಪುಣೆ: ಪತ್ನಿ ಹಾಗೂ 8 ವರ್ಷದ ಮಗನನ್ನು ಕೊಂದು ಟೆಕ್ಕಿಯೊಬ್ಬ ಸಾವಿಗೆ ಶರಣಾದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.  ಮೊದಲಿಗೆ ಪತ್ನಿಯನ್ನು ಕೊಲೆಗೈದ ಟೆಕ್ಕಿ ನಂತರ ಮಗನನ್ನು ಕೊಂದು  ನಂತರ ತಾನು ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ಸುದ್ದಿಸಂಸ್ಥೆ ಪಿಟಿಐಗೆ  ಮಾಹಿತಿ ನೀಡಿದ್ದಾರೆ. ಮೃತ ಟೆಕ್ಕಿಯನ್ನು 44 ವರ್ಷದ ಸುದೀಪ್ತೊ ಗಂಗೂಲಿ ಪತ್ನಿ ಪ್ರಿಯಾಂಕಾ ಹಾಗೂ ಮಗ ತನಿಷ್ಕಾ ಎಂದು ಗುರುತಿಸಲಾಗಿದೆ.

ಈ ಜೋಡಿ ಯಾವುದೇ ಕರೆಗಳನ್ನು ಸ್ವೀಕರಿಸದ ಹಿನ್ನೆಲೆ ಬೆಂಗಳೂರಿನಲ್ಲಿರುವ ಮೃತ ಸುದೀಪ್ತೊ ಸಹೋದರ ಸ್ನೇಹಿತರೊಬ್ಬರಿಗೆ ಕರೆ ಮಾಡಿ ತನ್ನ ಸಹೋದರ ಮನೆಯತ್ತ ಹೋಗಿ ನೋಡಿ ಬರುವಂತೆ ತಿಳಿಸಿದ್ದಾರೆ. ಈ ವೇಳೆ  ಫ್ಲಾಟ್‌ ಹೊರಗಿನಿಂದ ಲಾಕ್ ಆಗಿರುವುದನ್ನು ಕಂಡ , ಅವರು ನಾಪತ್ತೆ ದೂರು ದಾಖಲಿಸಿದ್ದರು ಎಂದು  ಪುಣೆಯ ಚತುಶ್ರಿಂಗಿ (Chatushringi) ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಂತರ ಪೊಲೀಸರು ನಕಲಿ ಕೀ (duplicate key) ಬಳಸಿ ಬಾಗಿಲು ತೆರೆದು ಒಳನುಗ್ಗಿದ್ದಾಗ  ಸುದೀಪ್ತೊ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ ಆತನ ಪತ್ನಿ ಪ್ರಿಯಾಂಕಾ ಹಾಗೂ ಮಗ ತನಿಷ್ಕಾ  ಶವ ಮುಖಕ್ಕೆ ಪ್ಲಾಸ್ಟಿಕ್ ಚೀಲ (polythene bags) ಸುತ್ತಿಕೊಂಡಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.  ಆದರೆ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ. ಸುದೀಪ್ತೊ ಇತ್ತೀಚೆಗೆ ತಮ್ಮ ಸಾಫ್ಟ್‌ವೇರ್ ಕೆಲಸ ತೊರೆದು ತಮ್ಮದೇ ಹೊಸ ವ್ಯವಹಾರವೊಂದನ್ನು ಶುರು ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ಪೋರ್ನ್ ವೀಡಿಯೋ ನೋಡುವಾಗ ಹೆಂಡ್ತಿ ಕೈಗೆ ಸಿಕ್ಕಿಬಿದ್ದ ಗಂಡ, ಮುಂದೆ ನಡೆದಿದ್ದು ದುರಂತ!

ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿಯ ಕೊಲೆಗೈದ ಪಾಪಿ ಪತಿ!

ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿಯ ಕುತ್ತಿಗೆ ಬಿಗಿದು ಮಕ್ಕಳ ಮುಂದೆಯೇ ಪಾಪಿ ಪತಿ ಕೊಲೆಗೈದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೆಂಡೆಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಯೋಗಿತಾ (27) ಗಂಡನಿಂದಲೇ ಕೊಲೆಯಾಗಿದ್ದು, ಪತಿ ರವಿ, ಮಕ್ಕಳ ಮುಂದೆಯೇ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ರವಿ, ಪತ್ನಿಗೆ ಮನೆಯಿಂದ ಹೋಗುವಂತೆ ಹಿಂಸೆ ನೀಡ್ತಿದ್ದ ಎನ್ನಲಾಗಿದೆ. ಸಾಕಷ್ಟು ಬಾರಿ ನ್ಯಾಯ ಪಂಚಾಯಿತಿಯನ್ನು  ಗ್ರಾಮದ ಮುಖಂಡರು ನಡೆಸಿದ್ದರು.  ರಾತ್ರಿ ಮಕ್ಕಳಿಗೆ ಪಾನಿಪುರಿ ತಿನಿಸುತ್ತಿದ್ದಾಗ ಮತ್ತೆ ಗಂಡ ಹೆಂಡತಿ ನಡುವೆ ಜಗಳ ಆರಂಭವಾಗಿದೆ. 

ಬಳಿಕ ಪತ್ನಿ ಯೋಗಿತಾಗೆ ಮನಬಂದಂತೆ ಹೊಡೆದು ರೂಂ ಒಳಗೆ ರವಿಗೌಡ ಎಳೆದೋಯ್ದಿದ್ದಾನೆ. ತಕ್ಷಣ ಜಗಳದ ಬಗ್ಗೆ ಪಕ್ಕದ ಮನೆಯವರಿಗೆ ಮಕ್ಕಳು ವಿಚಾರ ತಿಳಿಸಿದ್ದು, ಅವರು ಬರುವಷ್ಟರಲ್ಲಿ ಪತ್ನಿಯನ್ನು ರವಿ ಕೊಲೆ ಮಾಡಿದ್ದಾನೆ. ಅಲ್ಲದೇ ಈ ವಿಚಾರವನ್ನು ಯಾರಿಗೂ ಹೇಳಬೇಡಿ ಎಂದು ಮಕ್ಕಳಿಗೆ ಹೇಳಿ ರವಿ ಪರಾರಿಯಾಗಿದ್ದಾನೆ. ಇನ್ನು ಮನೆ ಮುಂದೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಕಣ್ಣ ಮುಂದೆಯೇ ತಾಯಿ ಕಳೆದುಕೊಂಡು ಇಬ್ಬರು ಮಕ್ಕಳು ತಬ್ಬಲಿಯಾಗಿದ್ದಾರೆ. ಸದ್ಯ ಪರಾರಿಯಾಗಿರುವ ರವಿಯನ್ನ  ಸ್ಥಳಕ್ಕೆ ಕರೆಸುವಂತೆ ಯೋಗಿತಾ ಪೋಷಕರ ಪಟ್ಟು ಹಿಡಿದಿದ್ದು, ಅರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಪತ್ನಿ ಅನೈತಿಕ ಸಂಬಂಧ ಅನುಮಾನ: ಡಂಬಲ್ಸ್‌ನಿಂದ ಹೊಡೆದು ಕೊಲೆ

ಖಿಚಡಿಗೆ ಉಪ್ಪು ಹೆಚ್ಚು ಹಾಕಿದ್ದಕ್ಕೆ ಕತ್ತು ಹಿಸುಕಿ ಪತ್ನಿಯ ಕೊಲೆ

ಬೆಳಗ್ಗಿನ ಉಪಾಹಾರಕ್ಕೆ ತಯಾರಿಸಿದ ಖಿಚಡಿಗೆ ಉಪ್ಪು ಹೆಚ್ಚು ಹಾಕಿದಳು ಎಂದು ಸಿಟ್ಟುಗೊಂಡ ಪತಿಯೋರ್ವ ಪತ್ನಿಯನ್ನೇ ಕತ್ತು ಹಿಸುಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ (Maharashtra) ಥಾಣೆ (Thane)ಜಿಲ್ಲೆಯಲ್ಲಿ ನಡೆದಿದೆ. 46 ವರ್ಷದ ನಿಲೇಶ್ ಘಾಗ್  ತನ್ನ 40 ವರ್ಷದ ಪತ್ನಿಯನ್ನು ಕತ್ತು ಹಿಸುಕಿ ಕೊಂದಿದ್ದಾನೆ ಭಾಯಂದರ್ ಪೂರ್ವದ (Bhayandar East)  ಫಟಕ್ ರಸ್ತೆ (Phatak Road) ಪ್ರದೇಶದಲ್ಲಿ  ಈ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬೆಳಗ್ಗೆ 9.30 ರ ಸುಮಾರಿಗೆ ಉಪಹಾರ ಸೇವಿಸಿದ ಪತಿ ನಿಲೇಶ್ ಘಾಗ್ (Nilesh Ghagh) ನಂತರ ತನ್ನ ಪತ್ನಿ ನಿರ್ಮಲಾಳನ್ನು (Nirmala)ಕತ್ತು ಹಿಸುಕಿ ಕೊಂದಿದ್ದಾನೆ. ಆಕೆ ತಯಾರಿಸಿದ  'ಖಿಚಡಿ'ಯಲ್ಲಿ ಉಪ್ಪು ಹೆಚ್ಚಾಗಿದ್ದರಿಂದ ಕೋಪಗೊಂಡ ಆತ ಈ ಕೃತ್ಯವೆಸಗಿದ್ದಾನೆ. ಎಂದು ಮೀರಾ ಭಯಂದರ್-ವಸಾಯಿ ವಿರಾರ್ ಪೊಲೀಸ್ ಕಮಿಷನರೇಟ್‌ನ (Mira Bhayandar-Vasai Virar police commissionerate) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios