ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅರೆಯಂಗಡಿಯ ತೊಟ್ಟಿಲಗುಂಡಿಯಲ್ಲಿ ನಡೆದ ಘಟನೆ 

ಉತ್ತರಕನ್ನಡ(ನ.06): ಆಸ್ತಿ ಜಗಳ ವಿಚಾರಕ್ಕೆ ಜಗಳ ಮಾಡಿ ಅಣ್ಣನನ್ನು ತಮ್ಮಂದಿರೇ ದಾರುಣವಾಗಿ ಕೊಲೆ ಮಾಡಿದ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅರೆಯಂಗಡಿಯ ತೊಟ್ಟಿಲಗುಂಡಿಯಲ್ಲಿ ನಿನ್ನೆ(ಶನಿವಾರ) ನಡೆದಿದೆ. ಹನುಮಂತ ಹೊನ್ನಪ್ಪ ನಾಯ್ಕ್ (54) ಕೊಲೆಯಾದ ದುರ್ದೈವಿಯಾಗಿದ್ದಾನೆ. 

Add Asianetnews Kannada as a Preferred SourcegooglePreferred

ಇವರ ಸೋದರ ಮಾವ ಮಾರುತಿ ನಾಯ್ಕ್ (70) ಘಟನೆಯಲ್ಲಿ ಗಂಭೀರ ಗಾಯಕ್ಕೊಳಗಾಗಿದ್ದಾರೆ. ಈ ಹಿಂದೆ ಕೂಡಾ ಅಡಿಕೆ, ಆಸ್ತಿ ವಿಚಾರದಲ್ಲಿ ಅಣ್ಣ ತಮ್ಮಂದಿರಿಗೆ ಗಲಾಟೆಗಳಾಗುತ್ತಿತ್ತು. ಆದರೆ, ಇಂದು ಗಲಾಟೆ ತಾರಕಕ್ಕೇರಿದ್ದು, ತಮ್ಮಂದಿರಾದ ವಿನಾಯಕ ನಾಯ್ಕ, ಚಿದಾನಂದ ನಾಯ್ಕ್ ರಾಡ್‌ನಲ್ಲಿ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ. 

ಕುಡಿದ ಅಮಲಿನಲ್ಲಿ ಯುವಕನ ಕೈ ಕತ್ತರಿಸಿ ದುಷ್ಕರ್ಮಿಗಳ ಪುಂಡಾಟಿಕೆ: ಓರ್ವನ ಬಂಧನ

ತಲೆಗೆ ಹೊಡೆದ ಕಾರಣ ಗಂಭೀರ ಗಾಯಗೊಂಡ ಹೊನ್ನಪ್ಪ ನಾಯ್ಕ್, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಹೊನ್ನಾವರ ಪೊಲೀಸರು, ಪ್ರಕರಣ ದಾಖಲಿಸಿದ್ದಾರೆ.