ಚಿಕ್ಕೋಡಿ ಪಟ್ಟಣದ ಹೊರವಲಯದ ನಿರ್ಜನ ಪ್ರದೇಶದಲ್ಲಿ ನಿಪ್ಪಾಣಿ ತಾಲೂಕಿನ ಕೋಡ್ನಿ ಗ್ರಾಮದ ಭಾಸ್ಕರ ಮದಕೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಚಿಕ್ಕೋಡಿ(ಆ.28): ಮರಕ್ಕೆ ನೇಣು ಬಿಗಿದುಕೊಂಡು 60 ವರ್ಷದ ವೃದ್ಧ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೊರವಲಯದಲ್ಲಿ ಇಂದು(ಬುಧವಾರ) ನಡೆದಿದೆ. 

Add Asianetnews Kannada as a Preferred SourcegooglePreferred

ಭಾಸ್ಕರ ಮದಕೆ ಎಂಬುವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾರೆ. ಚಿಕ್ಕೋಡಿ ಪಟ್ಟಣದ ಹೊರವಲಯದ ನಿರ್ಜನ ಪ್ರದೇಶದಲ್ಲಿ ನಿಪ್ಪಾಣಿ ತಾಲೂಕಿನ ಕೋಡ್ನಿ ಗ್ರಾಮದ ಭಾಸ್ಕರ ಮದಕೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

Kolar: ವರದಕ್ಷಿಣೆ ಕಿರುಕುಳ; ಪತಿ ಮನೆ ಮುಂದೆಯೇ ನವವಿವಾಹಿತೆಯ ಅಂತ್ಯಕ್ರಿಯೆ ಮಾಡಿದ ಕುಟುಂಬ!

ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆಯನ್ನ ಮುಂದುವರಿಸಿದ್ದಾರೆ.