Asianet Suvarna News Asianet Suvarna News

ಕುಂದಾಪುರ: 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ, ಕಾರಣ?

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಕೆ ಅನೇಕ ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಕುಂದಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

7th Standard Student Committed Suicide at Kundapur in Udupi grg
Author
First Published Dec 22, 2023, 4:49 AM IST

ಕುಂದಾಪುರ(ಡಿ.22):  ಇಲ್ಲಿನ ಕಟ್ಕೆರೆ ಗ್ರಾಮದಲ್ಲಿ 13 ವರ್ಷದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಇಲ್ಲಿನ ನಿವಾಸಿ ರಾಜಶೇಖರ ಎಂಬವರ ಮಗಳು ರಿಷಿತಾ ಆತ್ಮಹತ್ಯೆ ಮಾಡಿಕೊಂಡವಳು. 

ಈಕೆ 7ನೇ ತರಗತಿಯಲ್ಲಿ ಓದುತ್ತಿದ್ದು, ಶಾಲೆಯಿಂದ ಮನೆಗೆ ಬಂದವಳೇ ಮನೆಯ ಸಮೀಪದ ಬಾವಿಗೆ ಹಾರಿದಳು. ತಕ್ಷಣ ಮನೆಯವರು ಆಗ್ನಿಶಾಮಕ ದಳವನ್ನು ಕರೆಯಿಸಿ ಆಕೆಯನ್ನು ಮೇಲೆತ್ತಿದರಾದರೂ, ಆಕೆ ಅದಾಗಲೇ ಮೃತಪಟ್ಟಿದ್ದಳು.

ಫ್ಯಾಕ್ಟರಿಯಲ್ಲಿ ರಜೆ ನೀಡದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಕೆ ಅನೇಕ ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಕುಂದಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

Follow Us:
Download App:
  • android
  • ios