ಓದು ಅಂತ ಬುದ್ಧಿವಾದ ಹೇಳಿದಕ್ಕೆ 9 ನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ನಡೆದಿದೆ. 

ಕೋಲಾರ(ಜ.05): ಓದು ಅಂತ ಬುದ್ಧಿವಾದ ಹೇಳಿದಕ್ಕೆ 9 ನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ. ಉದಯ್‌ಕುಮಾರ್(16) ಎಂಬಾತನೇ ಮೃತ ವಿದ್ಯಾರ್ಥಿಯಾಗಿದ್ದಾನೆ. 

Add Asianetnews Kannada as a Preferred SourcegooglePreferred

ಪೋಷಕರು ಬುದ್ಧಿವಾದ ಹೇಳಿದಕ್ಕೆ ಮನನೊಂದು 9ನೇ ತರಗತಿ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷ ಸೇವಿಸಿದ್ದ ಉದಯ್ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. 

ಅನಸ್ತೇಸಿಯಾ ಚುಚ್ಚಿಕೊಂಡು 24 ವರ್ಷದ ಯುವ ವೈದ್ಯೆ ಆತ್ಮಹತ್ಯೆ

ಈ ಸಂಬಂಧ ಮೃತನ ತಂದೆ ಆದ್ಯಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುಡಿಆರ್ ಅಡಿ ಪೋಲಿಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.