ಬೆಂಗಳೂರಿನಲ್ಲಿ ವೈದ್ಯರೊಬ್ಬರಿಗೆ ಅಪರಿಚಿತ ಮಹಿಳೆಯಿಂದ ಆಘಾತಕಾರಿ ಮೆಸೇಜ್ ಬಂದಿದೆ. ತನ್ನ ಅತ್ತೆಯನ್ನು ಕೊಲ್ಲಲು ಮಾತ್ರೆ ಬರೆದುಕೊಡುವಂತೆ ಮಹಿಳೆ ವೈದ್ಯರಲ್ಲಿ ಮನವಿ ಮಾಡಿದ್ದಾಳೆ. ಈ ವಿಚಿತ್ರ ಘಟನೆ ಸಂಜಯನಗರ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು (ಫೆ.20):ತನಗೆ ಕಾಡುತ್ತಿರುವ ಅತ್ತೆಯನ್ನು ಕೊಲ್ಲಲು ಮಾತ್ರೆ ಬರೆದುಕೊಡುವಂತೆ ವೈದ್ಯರೊಬ್ಬರಿಗೆ ಅಪರಿಚಿತ ಮಹಿಳೆ ಮೆಸೇಜ್ ಮಾಡಿ ನೆರವು ಕೋರಿರುವ ವಿಚಿತ್ರ ಘಟನೆ ಸಂಜಯನಗರ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಳೆದ 2 ದಿನಗಳ ಹಿಂದೆ ಭದ್ರಪ್ಪ ಲೇಔಟ್ನ ವೈದ್ಯ ಡಾ.ಸುನೀಲ್ ಕುಮಾರ್ ಅವರಿಗೆ ಅನಾಮಧೇಯ ಹೆಸರಿನಲ್ಲಿ ವಾಟ್ಸಪ್ ಮೆಸೇಜ್ ಬಂದಿದ್ದು, ಈ ಬಗ್ಗೆ ಸಂಜಯನಗರ ಠಾಣೆಗೆ ಅವರು ದೂರು ದಾಖಲಿಸಿದ್ದಾರೆ. ಅದರನ್ವಯ ತನಿಖೆಗಿಳಿದಿರುವ ಪೊಲೀಸರು, ಆರೋಪಿ ಮಹಿಳೆ ಪತ್ತೆಗೆ ಹುಡುಕಾಟ ಶುರು ಮಾಡಿದ್ದಾರೆ.
ಇದನ್ನೂ ಓದಿ: ಜಗಳವಾಡಬೇಡಿ ಎಂದ ಅತ್ತೆಯ ಸುತ್ತಿಗೆಯಲ್ಲಿ ಬಡಿದು ಕೊಂದ ಅಳಿಯ
ನನಗೆ ಸೋಮವಾರ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ನಿರಂತವಾಗಿ ಮೆಸೇಜ್ಗಳು ಬಂದಿದ್ದವು. "ನಮ್ಮ ಅತ್ತೆ ತುಂಬಾ ಹಿಂಸೆ ಕೊಡುತ್ತಾರೆ. ಆದ ಕಾರಣ ನಮ್ಮ ಅತ್ತೆಯನ್ನು ಸಾಯಿಸಲು ಎರಡು ಮಾತ್ರೆಗಳನ್ನು ಬರೆದುಕೊಡಿ " ಎಂದು ಆಕೆ ಮೆಸೇಜ್ನಲ್ಲಿ ಕೋರಿದ್ದರು ಎಂದು ದೂರಿನಲ್ಲಿ ವೈದ್ಯರು ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಅತ್ತೆ ಒಂದು ದಿನವೂ ಬೈದಿಲ್ಲ ಅಂದ್ರು ಬಿಎಸ್ವೈ ಹಿರಿ ಸೊಸೆ | MP Raghavendra | Home Minister | Suvarna News
