ಶಹಾಬಾದ್‌ನಲ್ಲಿ ಗುಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು ಯುವಕನೊಬ್ಬ ಪೊಲೀಸ್ ಜೀಪ್ ಕದ್ದು ಪರಾರಿಯಾಗಿದ್ದಾನೆ. ಈ ಘಟನೆ ಭಂಕೂರಿನ ಐನಾಪೂರ ಬಳಿ ನಡೆದಿದ್ದು, ಕೊಲೆ ಪ್ರಕರಣದ ದ್ವೇಷಕ್ಕೆ ದಾಳಿ ನಡೆದಿದೆ ಎನ್ನಲಾಗಿದೆ.

ಕಲಬುರಗಿ (ಸೆ.13): ಶಹಾಬಾದ್‌: ಗುಂಡಿನ ದಾಳಿಯಿಂದ ಬಚಾವ್‌ ಆಗಲು ಹೈವೇ ಪೆಟ್ರೋಲಿಂಗ್‌ ಪೊಲೀಸ್ ಜೀಪನ್ನೇ ಓಡಿಸಿಕೊಂಡು ಹೋಗಿ ಯುವಕನೋರ್ವ ಸಿನಿಮೀಯ ಶೈಲಿಯಲ್ಲಿ ಪಾರಾದ ಘಟನೆ ಇಲ್ಲಿನ ಭಂಕೂರಿನ ಐನಾಪೂರ ಬಳಿ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಹಾಬಾದ್‌ ನಿವಾಸಿ ಶಂಕರ ಅಳ್ಳೋಳ್ಳಿ ತನ್ನ ಸಂಬಂಧಿಕರು, ಸ್ನೇಹಿತರೊಂದಿಗೆ ಡಾಬಾದಲ್ಲಿ ರಾತ್ರಿ ಭೋಜನ ಸೇವಿಸುತ್ತಿದ್ದರು. ಏಳೆಂಟು ಜನರ ಗುಂಪು ಡಾಬಾಗೆ ನುಗ್ಗಿ ಗುಂಡಿನ ದಾಳಿ ನಡೆಸಿದೆ. ಆಗ ಡಾಬಾದ ಹಿಂಬದಿಯಿಂದ ಹೈವೇಗೆ ಶಂಕರ ಬಂದಿದ್ದಾರೆ. 

ಇದನ್ನೂ ಓದಿ: ಭಿಕ್ಷೆ ಬೇಡಿ ಆಸ್ಪತ್ರೆ ಬಿಲ್‌ ಕಟ್ಟಿದ್ರೂ ಚಿಕಿತ್ಸೆ ಫಲಿಸದೆ ಮಗು ಸಾವು!

ಅಲ್ಲೇ ಸಮೀಪದಲ್ಲಿದ್ದ ಪೊಲೀಸರು, ಗಲಾಟೆ ಶಬ್ದ ಕೇಳಿ ಜೀಪು ನಿಲ್ಲಿಸಿ ಡಾಬಾಗೆ ಧಾವಿಸಿದ್ದಾರೆ. ಈ ವೇಳೆ ಪೊಲೀಸರ ಜೀಪು ಏರಿದ ಶಂಕರನಿಗೆ ಕೀ ಗಾಡಿಯಲ್ಲೇ ಇರುವುದು ಕಂಡಿದೆ. ಆತ ಜೀವ ಭಯದಲ್ಲಿ ಜೀಪನ್ನು ಓಡಿಸಿಕೊಂಡು ಹೋಗಿ ಪಾರಾಗಿದ್ದಾನೆ. 

ಕೊಲೆ ಪ್ರಕರಣದ ದ್ವೇಷಕ್ಕೆ ಶಂಕರನ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.