ಮಾನಸಿಕ ಒತ್ತಡದಿಂದ ಹಾಸನ ಮೂಲದ ಮೆಡಿಕಲ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಬಸವೇಶ್ವರ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

ಚಿತ್ರದುರ್ಗ (ಆ.1): ಮಾನಸಿಕ ಒತ್ತಡದಿಂದ ಹಾಸನ ಮೂಲದ ಮೆಡಿಕಲ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಬಸವೇಶ್ವರ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಮನೋಜ್(22) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಹಾಸನ ಜಿಲ್ಲೆವರಾಗಿದ್ದು, ಪಟ್ಟಣದ ಬಸವೇಶ್ವರ ಮೆಡಿಕಲ್ ಕಾಲೇಜಿನಲ್ಲಿ 2ನೇ ವರ್ಷದ ವ್ಯಾಸಂಗ ಮಾಡುತ್ತಿದ್ದ. ಸಾಯುವ ಮುನ್ನ ಡೆತ್ ನೋಟು ಬರೆದಿರುವ ಮೃತ ವಿದ್ಯಾರ್ಥಿ, ನನ್ನ ಸಾವಿಗೆ ನಾನೇ ಕಾರಣ. ಬೇರೆ ಯಾರೂ ಕಾರಣರಲ್ಲ ಎಂದು ಬರೆದಿರುವ ವಿದ್ಯಾರ್ಥಿ. ಓದುವ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ವಯನಾಡು ಭೂಕುಸಿತ ದುರಂತ: ಮೃತ ಕುಟುಂಬಕ್ಕೆ ಸಾಂತ್ವನ ಹೇಳಿದ ನಿಖಿಲ್; ₹70,000 ಧನ ಸಹಾಯ