Asianet Suvarna News Asianet Suvarna News

ತಲ್ವಾರ್ ತೋರಿಸಿದ ಯುವಕನಿಗೆ ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು!

ತಲ್ವಾರ್‌ ಹಿಡಿದುಕೊಂಡು ಹೆದ್ದಾರಿಯಲ್ಲಿ ಓಡಾಡಿ ಆತಂಕ ಮೂಡಿಸಿದ್ದ ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಆನಂದಪುರದಲ್ಲಿ ಭಾನುವಾರ ನಡೆದಿದೆ,

A young man  who ran on the highyway holding long rav
Author
First Published May 27, 2024, 8:23 AM IST

ಶಿವಮೊಗ್ಗ (ಮೇ.27): ತಲ್ವಾರ್‌ ಹಿಡಿದುಕೊಂಡು ಹೆದ್ದಾರಿಯಲ್ಲಿ ಓಡಾಡಿ ಆತಂಕ ಮೂಡಿಸಿದ್ದ ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಆನಂದಪುರದಲ್ಲಿ ಭಾನುವಾರ ನಡೆದಿದೆ,

ಯುವಕನೊಬ್ಬ ತಲ್ವಾರ್‌ ಹಿಡಿದು ನಡೆದು ಹೋಗುತ್ತಿರುವುದನ್ನು ಕಾರಿನಲ್ಲಿದ್ದವರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ತಲ್ವಾರ್‌ ಹಿಡಿದು ತೆರಳುತ್ತಿದ್ದವನನ್ನು ಸ್ಥಳೀಯರು ತಡೆದಿದ್ದಾರೆ. ಈ ವೇಳೆ ‘ನನ್ನ ತಮ್ಮನಿಗೆ ಆಕ್ಸಿಡೆಂಟ್‌ ಅಗಿದೆʼ ಎಂದು ಆತ ಕೂಗಿರುವುದು ವಿಡಿಯೋದಲ್ಲಿ ದಾಖಲಾಗಿದೆ. 

ಕಾಂಗ್ರೆಸ್‌ ಸರ್ಕಾರದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲ: ಆರಗ ಜ್ಞಾನೇಂದ್ರ

ಆತನ ಕೈಯಲ್ಲಿದ್ದ ತಲ್ವಾರ್‌ ಕಸಿದ ಸ್ಥಳೀಯರು ರಸ್ತೆಯ ಪಕ್ಕದ ಕೆರೆಗೆ ಎಸೆದಿದ್ದಾರೆ. ಬಳಿಕ ಯುವಕನಿಗೆ ಧರ್ಮದೇಟು ನೀಡಿದ್ದಾರೆ. ಆ ಯುವಕನನ್ನು ಪೊಲೀಸ್‌ ಠಾಣೆಗೆ ಒಪ್ಪಿಸಿದ್ದಾರೆ. ಆನಂದಪುರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವಕ ತಲ್ವಾರ್‌ ಬೀಸುತ್ತ ಓಡಾಡಿದ್ದರಿಂದ ಆನಂದಪುರದಲ್ಲಿ ಕೆಲ ಹೊತ್ತು ಆತಂಕ ಸೃಷ್ಟಿಯಾಗಿತ್ತು. ಸದ್ಯ ಇದರ ವಿಡಿಯೋ ವೈರಲ್‌ ಆಗಿದೆ.

Latest Videos
Follow Us:
Download App:
  • android
  • ios