Asianet Suvarna News Asianet Suvarna News

ಐಶಾರಾಮಿ ಕಾರಿನಲ್ಲಿ ಜಾನುವಾರು ಕಳವು: ಓರ್ವನ ಬಂಧನ

*   ತ್ಯಾಗರ್ತಿ ಗ್ರಾಮದಲ್ಲಿ ಜೂ.8ರಂದು ಐಷಾರಾಮಿ ಕಾರಿನಲ್ಲಿ ಜಾನುವಾರು ಕಳ್ಳತನ 
*  ಹೈಫೈ ಕಾರಿನಲ್ಲಿ ಜಾನುವಾರು ಕಳವು 
* ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ನಾಲ್ಕು ಜನ ಆರೋಪಿಗಳ ಬಂಧನಕ್ಕೆ ಕ್ರಮ 
 

Accused Arrested For Cow Shipping on Car in Shivamogga grg
Author
Bengaluru, First Published Jun 18, 2022, 4:45 AM IST

ಸಾಗರ(ಜೂ.18):  ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಜೂ.8ರಂದು ಐಷಾರಾಮಿ ಕಾರಿನಲ್ಲಿ ಜಾನುವಾರು ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಗ್ರಾಮಾಂತರ ಠಾಣೆ ಪೊಲೀಸರು ಓರ್ವನನ್ನು ವಶಕ್ಕೆ ಪಡೆದ ಘಟನೆ ಗುರುವಾರ ನಡೆದಿದೆ.

ಗ್ರಾಮದಲ್ಲಿ ಹೈಫೈ ಕಾರಿನಲ್ಲಿ ಜಾನುವಾರು ಕಳವು ನಡೆದ ಘಟನೆ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲು ಜಿಲ್ಲಾ ರಕ್ಷಣಾಧಿಕಾರಿ ಲಕ್ಷಿ ್ಮೕಪ್ರಸಾದ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಡಾ.ವಿಕ್ರಮ್‌ ಅಮಾತೆ ಮಾರ್ಗದರ್ಶನದಲ್ಲಿ, ಸಾಗರ ಪೊಲೀಸ್‌ ಸಹಾಯಕ ಅಧೀಕ್ಷಕ ರೋಹನ್‌ ಜಗದೀಶ್‌, ಗ್ರಾಮಾಂತರ ಠಾಣೆ ಸರ್ಕಲ್‌ ಇನ್‌ಸ್ಪೆಕ್ಟರ್‌ ಪ್ರವೀಣಕುಮಾರ್‌, ಕಾರ್ಗಲ್‌ ಠಾಣೆ ಸಬ್‌ ಇನ್‌ಸ್ಪೆಕ್ಟರ್‌ ತಿರುಮಲೇಶ್‌ ನಾಯ್‌್ಕ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು.

SHIVAMOGGA: ಮದುವೆಗೆ ಅಡ್ಡಿಯಾದ ಕುಜದೋಷ: ವಿಷ ಸೇವಿಸಿದ್ದ ಮಹಿಳಾ ಪೇದೆ ಸಾವು!

ತಂಡವು ಪ್ರಕರಣದ ಮೊದಲನೇ ಆರೋಪಿ ಶಿವಮೊಗ್ಗ ಟಿಪ್ಪುನಗರ ವಾಸಿ ಮಹ್ಮದ್‌ ಇರ್ಫಾನ್‌ ಯಾನೆ ಗೌತಮ್‌ ಯಾನೆ ಶೇಖ್‌ ಮಹ್ಮದ್‌ ಸಾದಿಕ್‌ ಎಂಬಾತನನ್ನು ವಶಕ್ಕೆ ಪಡೆದಿದೆ. ಬಂಧಿತನಿಂದ .10 ಲಕ್ಷ ರು. ಮೌಲ್ಯದ ಮಹೇಂದ್ರ ಎಕ್ಸ್‌ಯುವಿ ಕಾರು, ಜಾನುವಾರು ಕಡಿದು ಮಾರಾಟ ಮಾಡಿದ ಬಾಬ್ತು .25 ಸಾವಿರ ನಗದು, ಜಾನುವಾರು ಕಟಾವು ಮಾಡಲು ಬಳಸಿದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ನಾಲ್ಕು ಜನ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಸುಜಾತ, ರಘುವೀರ್‌, ಸಿಬ್ಬಂದಿ ತಾರಾನಾಥ್‌, ಸನಾವುಲ್ಲಾ, ರತ್ನಾಕರ್‌, ಸಂತೋಷ್‌ ನಾಯ್‌ಕ, ಶ್ರೀಧರ್‌, ಅಶೋಕ್‌, ರವಿಕುಮಾರ್‌, ಈರಯ್ಯ ಮಠಪತಿ, ಪ್ರಕಾಶ್‌ ಅಂಬ್ಲಿ, ಪ್ರವೀಣಕುಮಾರ್‌, ಸುನೀಲ್‌, ಗಿರೀಶ್‌ ಬಾಬು ಪಾಲ್ಗೊಂಡಿದ್ದರು.
 

Follow Us:
Download App:
  • android
  • ios