ಬಂಧಿತ ಆರೋಪಿಯಿಂದ 25 ಗ್ರಾಂ.ಬಂಗಾರದ ಆಭರಣ ಮತ್ತು 150 ಗ್ರಾಂ.ಬೆಳ್ಳಿ ಆಭರಣ ಜಪ್ತಿ. 

ಕಲಬುರಗಿ(ಜೂ.07):  ರಾತ್ರಿ ಮನೆ ಕಳ್ಳತನ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಘವೇಂದ್ರ ನಗರ ಪೊಲೀಸರು ಬಾಲಕನೊಬ್ಬನನ್ನು ಬಂಧಿಸಿ 25 ಗ್ರಾಂ. ಬಂಗಾರ ಮತ್ತು 150 ಗ್ರಾಂ. ಬೆಳ್ಳಿ ಆಭರಣ ಜಪ್ತಿ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮನೆ ಬೀಗ ಮುರಿದು 10 ಗ್ರಾಂ. ಬಂಗಾರದ ಆಭರಣ ಮತ್ತು 17 ಸಾವಿರ ರು. ನಗದು ಕಳವು ಮಾಡಲಾಗಿದೆ ಎಂದು ನಗರದ ಎಂಎಸ್‌ಕೆಮಿಲ್‌ ಬಡಾವಣೆಯ ಇಕ್ಬಾಲ್‌ ಕಾಲೋನಿಯ ಮೊಹ್ಮದ್‌ ಜುಲ್ಪೇಖಾರೋದ್ದಿನ್‌ ಅವರು ರಾಘವೇಂದ್ರ ನಗರ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. 

10 ಕೋಟಿ ಮೌಲ್ಯದ 15000 ಎಲ್‌ಎಸ್‌ಡಿ ಮಾತ್ರೆಗಳು ವಶ: ಇತಿಹಾಸದಲ್ಲೇ ಬೃಹತ್‌ ಮೊತ್ತದ ಡ್ರಗ್ಸ್ ಜಪ್ತಿ

ಈ ದೂರಿನ ಅನ್ವಯ ನಗರ ಉಪ ಪೊಲೀಸ್‌ ಆಯುಕ್ತ ಅಡ್ಡೂರು ಶ್ರೀನಿವಾಸಲು ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಉಪ ವಿಭಾಗದ ಎಸಿಪಿ ಭೂತೇಗೌಡ, ರಾಘವೇಂದ್ರ ನಗರ ಪೊಲೀಸ್‌ ಠಾಣೆ ಪಿಐ ಕುಬೇರ ಎಸ್‌.ರಾಯಮಾನೆ ಅವರ ನೇತೃತ್ವದಲ್ಲಿ ಸಿಬ್ಬಂದಿ ಸಿಕ್ರೇಶ್ವರ, ಉಮೇಶ, ಮುಜಾಹಿದ್‌ ತೊತ್ವಾಲ್‌, ಶರಣಬಸವ, ಉಮೇಶ, ಆತ್ಮಕುಮಾರ ಅವರು ತನಿಖೆ ನಡೆಸಿ ಕಾನೂನು ಸಂಘರ್ಷಕ್ಕೆ ಒಳಪಟ್ಟ 16 ವರ್ಷದ ಬಾಲಕನನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ಬಾಲಕ ಮೂರು ಮನೆ ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. 

ಬಂಧಿತ ಆರೋಪಿಯಿಂದ 25 ಗ್ರಾಂ.ಬಂಗಾರದ ಆಭರಣ ಮತ್ತು 150 ಗ್ರಾಂ.ಬೆಳ್ಳಿ ಆಭರಣ ಜಪ್ತಿ ಮಾಡಿದ್ದಾರೆ. ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯಕ್ಕೆ ನಗರ ಪೊಲೀಸ್‌ ಆಯುಕ್ತ ಚೇತನ್‌ ಆರ್‍.ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.