*  ಕೋಲಾರ ತಾಲೂಕಿನ ಹೊಲ್ಲಂಬಳ್ಳಿ ಗ್ರಾಮದಲ್ಲಿ ನಡೆದ ಘಟನೆ*  ಅಗ್ರಿಗೋಲ್ಡ್‌ ಕಂಪನಿಯ ವಂಚನೆ ಬಯಲು*  ಹಣ ವಾಪಸ್ ಕೊಡಿಸುವಂತೆ ಪೀಡಿಸುತ್ತಿದ್ದ ಗ್ರಾಹಕರು  

ಕೋಲಾರ(ಸೆ.22): ಅಗ್ರಿಗೋಲ್ಡ್‌ ಕಂಪನಿಯ ಏಜೆಂಟ್‌ವೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕಿನ ಹೊಲ್ಲಂಬಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಕೋಲಾರ ತಾಲೂಕಿನ ಹೊಲ್ಲಂಬಳ್ಳಿಯ ಡಿ.ಎಂ. ಶ್ರೀನಿವಾಸಪ್ಪ (53) ಅವರು ಆತ್ಮಹತ್ಯೆ ಮಾಡಿಕೊಂಡವರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

2004ರವರೆಗೂ ಅಗ್ರಿಗೋಲ್ಡ್‌ನಲ್ಲಿ ಏಜೆಂಟ್ ಆಗಿದ್ದ ಅವರು ಸಂಸ್ಥೆಗೆ 2 ಕೋಟಿ ಸಂಗ್ರಹಿಸಿ ಕೊಟ್ಟಿದ್ದರು. ಅಗ್ರಿಗೋಲ್ಡ್‌ ಕಂಪನಿಯ ವಂಚನೆ ಬಯಲಾದ ಬಳಿಕ ಸಂಸ್ಥೆಗೆ ಪಾವತಿಸಿದ ಹಣ ವಾಪಸ್ ಕೊಡಿಸುವಂತೆ ಗ್ರಾಹಕರು ಪೀಡಿಸುತ್ತಿದ್ದರು.

ರಾಜ್ಯದಲ್ಲಿ ಮತ್ತೊಂದು ದುರ್ಘಟನೆ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಕೇಸ್ ನ್ಯಾಯಾಲಯದಲ್ಲಿದೆ ಎಂದರೂ ಜನ ಕೇಳುತ್ತಿರಲಿಲ್ಲ. ಇದರಿಂದ ಶ್ರೀನಿವಾಸಪ್ಪ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.