Asianet Suvarna News Asianet Suvarna News

ಕೋಲಾರ: 2 ಕೋಟಿ ಸಂಗ್ರಹಿಸಿದ್ದ ಅಗ್ರಿಗೋಲ್ಡ್‌ ಏಜೆಂಟ್ ಆತ್ಮಹತ್ಯೆ

*  ಕೋಲಾರ ತಾಲೂಕಿನ ಹೊಲ್ಲಂಬಳ್ಳಿ ಗ್ರಾಮದಲ್ಲಿ ನಡೆದ ಘಟನೆ
*  ಅಗ್ರಿಗೋಲ್ಡ್‌ ಕಂಪನಿಯ ವಂಚನೆ ಬಯಲು
*  ಹಣ ವಾಪಸ್ ಕೊಡಿಸುವಂತೆ ಪೀಡಿಸುತ್ತಿದ್ದ ಗ್ರಾಹಕರು 
 

Agrigold Agent Commited Suicide in Kolar grg
Author
Bengaluru, First Published Sep 22, 2021, 8:43 AM IST

ಕೋಲಾರ(ಸೆ.22):  ಅಗ್ರಿಗೋಲ್ಡ್‌ ಕಂಪನಿಯ ಏಜೆಂಟ್‌ವೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕಿನ ಹೊಲ್ಲಂಬಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಕೋಲಾರ ತಾಲೂಕಿನ ಹೊಲ್ಲಂಬಳ್ಳಿಯ ಡಿ.ಎಂ. ಶ್ರೀನಿವಾಸಪ್ಪ (53) ಅವರು ಆತ್ಮಹತ್ಯೆ ಮಾಡಿಕೊಂಡವರು. 

2004ರವರೆಗೂ ಅಗ್ರಿಗೋಲ್ಡ್‌ನಲ್ಲಿ ಏಜೆಂಟ್ ಆಗಿದ್ದ ಅವರು ಸಂಸ್ಥೆಗೆ 2 ಕೋಟಿ ಸಂಗ್ರಹಿಸಿ ಕೊಟ್ಟಿದ್ದರು. ಅಗ್ರಿಗೋಲ್ಡ್‌ ಕಂಪನಿಯ ವಂಚನೆ ಬಯಲಾದ ಬಳಿಕ ಸಂಸ್ಥೆಗೆ ಪಾವತಿಸಿದ ಹಣ ವಾಪಸ್ ಕೊಡಿಸುವಂತೆ ಗ್ರಾಹಕರು ಪೀಡಿಸುತ್ತಿದ್ದರು.

ರಾಜ್ಯದಲ್ಲಿ ಮತ್ತೊಂದು ದುರ್ಘಟನೆ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಕೇಸ್ ನ್ಯಾಯಾಲಯದಲ್ಲಿದೆ ಎಂದರೂ ಜನ ಕೇಳುತ್ತಿರಲಿಲ್ಲ. ಇದರಿಂದ ಶ್ರೀನಿವಾಸಪ್ಪ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow Us:
Download App:
  • android
  • ios