ಬೈರಗೊಂಡ ಮೇಲೆ ಗುಂಡಿನ ದಾಳಿ ಪ್ರಕರಣ|  ಮತ್ತೆ ಮೂವರ ಬಂಧನ| ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 19 ಆರೋಪಿಗಳ ಸೆರೆ| ಬಂಧಿತರಿಂದ ಕೃತ್ಯಕ್ಕೆ ಬಳಸಿದ ಒಂದು ಮೋಟಾರ್‌ ಸೈಕಲ್‌, ಎರಡು ಮೊಬೈಲ್‌ ಹಾಗೂ ಒಂದು ಏರಗನ್‌ ಜಪ್ತಿ|  

ವಿಜಯಪುರ(ನ.13): ನಗರದ ಹೊರ ವಲಯದ ಕನ್ನಾಳ ಕ್ರಾಸ್‌ ಬಳಿ ಮಹಾದೇವ ಬೈರಗೊಂಡ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. 

Add Asianetnews Kannada as a Preferred SourcegooglePreferred

ಇಂಡಿ ತಾಲೂಕಿನ ದೇಗಿನಾಳ ಗ್ರಾಮದ ಸಂಘರ್ಷ ಸಂಜಯ ಸೂರ್ಯವಂಶಿ (23), ಉಮರಾಣಿ ಗ್ರಾಮದ ಸಂಗಪ್ಪ ಗುರುಬಸು ಯಮದೆ (23) ಹಾಗೂ ವಿಜಯಪುರದ ಜಲನಗರ ಬಡಾವಣೆಯ ಚೇತನ ಚೆನ್ನಪ್ಪ ಶಿರಶ್ಯಾಡ (30) ಬಂಧಿತ ಆರೋಪಿಗಳಾಗಿದ್ದಾರೆ. 

ವಿಜಯಪುರ: ಬೈರಗೊಂಡ ಶೂಟೌಟ್‌, ಮತ್ತೆ ಐವರ ಬಂಧನ

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಆರೋಪಿಗಳನ್ನು ಬಂಧಿಸಲಾಗಿದೆ. ಗುರುವಾರ ಮತ್ತೆ 3 ಆರೋಪಿಗಳನ್ನು ಬಂಧಿಸಲಾಗಿದೆ. ಇದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 19 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಒಂದು ಮೋಟಾರ್‌ ಸೈಕಲ್‌, ಎರಡು ಮೊಬೈಲ್‌ ಹಾಗೂ ಒಂದು ಏರಗನ್‌ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.