Asianet Suvarna News Asianet Suvarna News

ತನ್ನಂತೆಯೇ ಇದ್ದ ವ್ಯಕ್ತಿ ಕೊಲೆ ಮಾಡಿ ನಾನೇ ಸತ್ತೆ ಎಂದು ಬಿಂಬಿಸಲು ಹೋದವ ಖಾಕಿ ವಶ: ಮರ್ಡರ್ ಮಿಸ್ಟ್ರಿ ರೋಚಕ ಕತೆ

ಅಪಘಾತದಿಂದ ಸತ್ತರೆ ಕೋಟಿ ಕೋಟಿ ಜೀವ ವಿಮೆ ಹಣ ಕ್ಲೈಂ ಆಗಲಿದೆ ಎಂಬ ದುರುದ್ದೇಶದಿಂದ ತನ್ನಂತೆಯೇ ಇರುವ ಅಮಾಯಕ ವ್ಯಕ್ತಿಯನ್ನು ಕೊಲೆ ಮಾಡಿ ಅಪಘಾತದಿಂದ ಸತ್ತಿದ್ದಾನೆ ಎಂದು ಬಿಂಬಿಸಲು ಹೋಗಿ ವ್ಯಕ್ತಿಯೊಬ್ಬ ಸಿಕ್ಕಿ ಬಿದ್ದಿದ್ದಾನೆ. 

arrest of a couple who killed a beggar to get life insurance amount at hassan gvd
Author
First Published Aug 24, 2024, 11:38 PM IST | Last Updated Aug 24, 2024, 11:38 PM IST

ವರದಿ: ಕೆ.ಎಂ.ಹರೀಶ್, ಏಷ್ಯಾನೆಟ್ ಸುವರ್ಣ ನ್ಯೂಸ್, ಹಾಸನ

ಹಾಸನ (ಆ.24): ಅಪಘಾತದಿಂದ ಸತ್ತರೆ ಕೋಟಿ ಕೋಟಿ ಜೀವ ವಿಮೆ ಹಣ ಕ್ಲೈಂ ಆಗಲಿದೆ ಎಂಬ ದುರುದ್ದೇಶದಿಂದ ತನ್ನಂತೆಯೇ ಇರುವ ಅಮಾಯಕ ವ್ಯಕ್ತಿಯನ್ನು ಕೊಲೆ ಮಾಡಿ ಅಪಘಾತದಿಂದ ಸತ್ತಿದ್ದಾನೆ ಎಂದು ಬಿಂಬಿಸಲು ಹೋಗಿ ವ್ಯಕ್ತಿಯೊಬ್ಬ ಸಿಕ್ಕಿ ಬಿದ್ದಿದ್ದಾನೆ. ಹಣದಾಸೆಗೆ ಈತನ ಕೃತ್ಯಕ್ಕೆ ಕೈ ಜೋಡಿಸಿದ ಟ್ರಕ್ ಚಾಲಕ ಸಹ ಈಗ ಪೊಲೀಸರ ಅತಿಥಿಯಾಗಿದ್ದಾನೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಮುನಿಸ್ವಾಮಿಗೌಡ(೪೯) ಹಾಗೂ ಚಿಕ್ಕಮಗಳೂರು ಜಿಲ್ಲೆ ಲಕ್ಕವಳ್ಳಿ ಹೋಬಳಿಯ ಕರಕುಚ್ಚಿ ಗ್ರಾಮದ ಟ್ರಕ್ ಡ್ರೈವರ್ ದೇವೇಂದ್ರ ನಾಯಕ ಬಂಧಿತ ಆರೋಪಿಗಳು. 

ಘಟನೆ ಹಿನ್ನೆಲೆ: ಕಳೆದ ಆ.೧೩ ರಂದು ಬೆಳಗಿನ ಜಾವ ೩.೧೫ರ ಸುಮಾರಿಗೆ ಗಂಡಸಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲರಹಳ್ಳಿ ಗೇಟ್ ಹತ್ತಿರ ಟವೆರಾ  ಕಾರಿನ ಸ್ಟೆಪ್ನಿ ಬದಲಾಯಿಸುವಾಗ ಲಾರಿ ಗುದ್ದಿ ಸಾವು ಸಂಭವಿಸಿದೆ ಎಂದು ದೂರು ಬಂದಿತ್ತು. ನಂತರ ಗಂಡಸಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಬಳಿಕ ಹೊಸಕೋಟೆ ನಗರದ ಶಿಲ್ಪಾರಾಣಿ ಬಂದು ಅಪಘಾತದಲ್ಲಿ ಮೃತಪಟ್ಟಿರುವುದು ನನ್ನ ಗಂಡ ಮುನಿಸ್ವಾಮಿಗೌಡ ಎಂದು ಹೇಳಿ ಮೃತದೇಹ ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ಮಾಡಿದ್ದಳು. ಈ ಬಗ್ಗೆ ಪ್ರಕರಣ ದಾಖಲಿಸಿ ಮುನಿಸ್ವಾಮಿಗೌಡನನ್ನು ಬಲಿ ಪಡೆದ ಲಾರಿ ಚಾಲಕನ ಬಗ್ಗೆ ತನಿಖೆ ಕೈಗೊಂಡರು. 

ಗ್ಯಾರಂಟಿಗಾಗಿ ರಸ್ತೆಯಲ್ಲಿ ಓಡಾಡುವವರಿಗೂ ಕಾಂಗ್ರೆಸ್ ಬರೆ: ಶಾಸಕ ಸುನಿಲ್ ಕುಮಾರ್

ತನಿಖೆ ವೇಳೆ ಮುನಿಸ್ವಾಮಿಗೌಡ ಅಪಘಾತದಿಂದ ಮೃತಪಟ್ಟಿಲ್ಲ ಎಂಬ ವಿಷಯ ತಿಳಿಯಿತು. ಹೀಗಾಗಿ ಕಲಂ ೧೦೩(೧), ೨೩೮ ಬಿ.ಎನ್.ಎಸ್. ಕಾಯಿದೆ ರೀತಿ ನ್ಯಾಯಾಲಯಕ್ಕೆ  ವರದಿ ಸಲ್ಲಿಸಿ, ಆರೋಪಿಗಳ ಪತ್ತೆಗಾಗಿ ಹಾಸನ ಎಸ್ಪಿ ಅವರ ನೇತೃತ್ವದಲಿ, ಎಎಸ್ಪಿ, ಡಿವೈಎಸ್ಪಿ ಅರಸೀಕೆರೆ ಅವರ ಮಾರ್ಗದರ್ಶನದಲ್ಲಿ  ಗಂಡಸಿ ಸಿಪಿಐ ರಾಘವೇಂದ್ರ  ಪಕ್ರಾಶ್,ಬಾಣಾವರ ಪಿಎಸ್‌ಐ ಸುರೇಶ್, ಗಂಡಸಿ ಪಿಎಸ್‌ಐ ಆರತಿ, ಮತ್ತು ಸಿಬ್ಬಂದಿ ತನಿಖೆ ಚುರುಕುಗೊಳಿಸಿದರು. ಕಡೆಗೆ ಅಪಘಾತ ಮಾಡಿದ ಲಾರಿ ಚಾಲಕ ದೇವೇಂದ್ರನಾಯಕ್ ಸಿಕ್ಕಿ ಬಿದ್ದ. ಆತನನ್ನು ವಿಚಾರಣೆಗೆ ಒಳ ಪಡಿಸಿದಾಗ ಅಪಘಾತದಲ್ಲಿ ಸತ್ತ ವ್ಯಕ್ತಿಯೇ ಬೇರೆ. 

ಮುನಿಸ್ವಾಮಿಗೌಡ ಬದುಕಿದ್ದಾನೆ ಎಂದು ತಿಳಿಸಿದ.  ಚಾಲಕ ನೀಡಿದ ಮಾಹಿತಿ ಮೇರೆಗೆ ಮುನಿಸ್ವಾಮಿಗೌಡ ಇರುವ ಜಾಗ ಪತ್ತೆ ಮಾಡಿ ಆತನನ್ನು ತನಿಖಾ ತಂಡ ವಶಕ್ಕೆ ಪಡೆಯಿತು. ಬಳಿಕ ಆತನನ್ನು ವಿಚಾರಣೆಗೆ ಒಳ ಪಡಿಸಿದಾಗ ತಾನು ಹೊಸಕೋಟೆಯಲ್ಲಿ ಟೈರ್ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದೆ. ಅಂಗಡಿಯಲ್ಲಿ ನಷ್ಟವಾಗಿತ್ತು. ಆ ನಷ್ಟವನ್ನು ಸರಿದೂಗಿಸಲು ಮತ್ತು ಕೆಲವರ ಬಳಿ ಪಡೆದುಕೊಂಡಿದ್ದ ಕೈಸಾಲ ತೀರಿಸುವುದು ಕಷ್ಟವಾಗಿತ್ತು. ಸಾಲ ತೀರಿಸಿ, ಆರ್ಥಿಕ ನಷ್ಟ ಸರಿ ದೂಗಿಸಿಕೊಳ್ಳಲು ಈಗಾಗಲೇ ಜೀವ ವಿಮಾ ನಿಗಮದಲ್ಲಿ ಹಲವು ಜೀವ ವಿಮಾ ಪಾಲಿಸಿ ಮಾಡಿಸಿದ್ದು.

ಮಗ ನಾಗಚೈತನ್ಯ ಮೇಲೆ ಕೋಪಗೊಂಡ ಲಕ್ಷ್ಮೀ ದಗ್ಗುಬಾಟಿ: ಸಮಂತಾ ಜೊತೆಗಿನ ಡಿವೋರ್ಸ್ ಕಾರಣಾನಾ?

ಅದರಲ್ಲಿ  ವಿಶೇಷವಾಗಿ ಡಬಲ್ ಆಕ್ಸಿಡೆಂಟ್ ಬೆನಿಫಿಟ್(ಡಿಎಬಿ) ಮಾಡಿಸಿದ್ದು, ಅಪಘಾತದಲ್ಲಿ ಮೃತಪಟ್ಟರೆ ಕೋಟಿಗಟ್ಟಲೆ ಹಣ ಬರಲಿದೆ ಎಂದು ತಿಳಿದು, ಅಪರಿಚಿತ ವ್ಯಕ್ತಿಯನ್ನು ಕರೆ ತಂದು, ಇತರರ ಸಹಾಯದಿಂದ ಅಪರಿಚಿತ ವ್ಯಕ್ತಿಯ ಮೇಲೆ ಲಾರಿ ಹತ್ತಿಸಿ ಕೊಲೆ ಮಾಡಿ, ಆತನೇ ಮುನಿಸ್ವಾಮಿಗೌಡ ಎಂದು ಬಿಂಬಿಸಿದ್ದ. ಇನ್ಷೂರೆನ್ಸ್ ಹಣ ಪಡೆಯಲು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು  ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ ಎಂದು ಎಸ್ಪಿ ಮೊಹಮದ್ ಸುಜೀತಾ  ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios