Asianet Suvarna News Asianet Suvarna News

Karnataka crimes: ದರೋಡೆಗೆ ಸಂಚು ಹಾಕಿದ್ದ ರೌಡಿ ಶೀಟರ್‌ನ ಐವರು ಸಹಚರರ ಸೆರೆ

ಮಾರಕಾಸ್ತ್ರಗಳೊಂದಿಗೆ ಸಾರ್ವಜನಿಕರ ಸುಲಿಗೆ ಮಾಡಲು ಹೊಂಚು ಹಾಕಿ ಕುಳಿತಿದ್ದ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

Arrest of five accomplices of rowdy sheeter mahesh who had planned robbery rav
Author
First Published Jun 19, 2023, 7:53 AM IST

ಬೆಂಗಳೂರು (ಜೂ.19) ಮಾರಕಾಸ್ತ್ರಗಳೊಂದಿಗೆ ಸಾರ್ವಜನಿಕರ ಸುಲಿಗೆ ಮಾಡಲು ಹೊಂಚು ಹಾಕಿ ಕುಳಿತಿದ್ದ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಈ ಐವರು ಆರೋಪಿಗಳು ಕುಖ್ಯಾತ ರೌಡಿ ಶೀಟರ್‌ ಮಹೇಶ್‌(Rowdy sheeter mahesh) ಅಲಿಯಾಸ್‌ ಸಿದ್ದಾಪುರ ಮಹೇಶ್‌ನ ಸಹಚರರಾಗಿದ್ದಾರೆ. ಬಂಧಿತರಿಂದ ಫಾರ್ಚೂನರ್‌ ಕಾರು ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ. ಶನಿವಾರ ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಪಕ್ಕದ ಬಿಟಿಎಸ್‌ ಸರ್ವಿಸ್‌ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಸಾರ್ವಜನಿಕರ ಸುಲಿಗೆ ಮಾಡಲು ಹೊಂಚು ಹಾಕಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ರೌಡಿಯ ಮಚ್ಚಿನ ಹಿಡಿಕೆ ಏಟಿಗೆ ವ್ಯಕ್ತಿ ಸಾವು

ಆರೋಪಿಗಳು ಕಳೆದ ವರ್ಷ ಬನಶಂಕರಿ ಮೆಟ್ರೋ ರೈಲು ನಿಲ್ದಾಣದ ಬಳಿ ರೌಡಿ ಶೀಟರ್‌ ಮದನ್‌ ಅಲಿಯಾಸ್‌ ಪಿಟೀಲ್‌ ಎಂಬಾತನನ್ನು ಕೊಲೆ ಮಾಡಿದ್ದ ರೌಡಿ ಶೀಟರ್‌ ಸಿದ್ದಾಪುರ ಮಹೇಶ್‌ನ ಸಹಚರರಾಗಿದ್ದಾರೆ. ಆರೋಪಿಗಳು ಸಾರ್ವಜನಿಕರ ಸುಲಿಗೆ ಮಾಡುವ ಜತೆಗೆ ಸಿದ್ದಾಪುರ ಮಹೇಶ ಎದುರಾಳಿ ಗುಂಪಿನ ವಿಲ್ಸನ್‌ ಗಾರ್ಡನ್‌ ನಾಗ ಅಥವಾ ಆತನ ಸಹಚರರು ಸಿಕ್ಕರೆ ಅವರ ಮೇಲೆ ದಾಳಿ ಮಾಡುವ ಉದ್ದೇಶ ಹೊಂದಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ್‌ ವೇಷಧರಿಸಿ ವಸೂಲಿ ಮಾಡುತ್ತಿದ್ದವನ ಬಂಧನ

ಕೊಪ್ಪಳ (ಜೂ.19) : ಪೊಲೀಸ್‌ ವೇಷ ಧರಿಸಿ ಹಣ ವಸೂಲಿ ಮಾಡುತ್ತಿದ್ದ ಓರ್ವನನ್ನು ಕೊಪ್ಪಳ ಪೊಲೀಸಲು ಬಂಧಿಸಿದ್ದಾರೆ. ಬಂಧಿತನನ್ನು ಗದಗ ಜಿಲ್ಲೆಯ ಗಂಗಾಪುರ ಗ್ರಾಮದ ನಿವಾಸಿ ಸಂಜಯ ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸರ ದಾಳಿ: ಮಾರಕಾಸ್ತ್ರ ಪತ್ತೆ

ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಿಂತಿರುತ್ತಿದ್ದ ಈತ ರಸ್ತೆಯಲ್ಲಿ ಬೈಕ್‌ನಲ್ಲಿ ಸಂಚಾರ ಮಾಡುವವರನ್ನು ತಡೆದು, ವಿಚಾರಣೆ ನಡೆಸುತ್ತಿದ್ದ. ಅವರು ಭಯಗೊಂಡಂತೆ ಕಂಡರೆ ಅವರಿಂದ ಹಣ ಕೀಳುತ್ತಿದ್ದ. ಬೋಚನಳ್ಳಿ ಗ್ರಾಮದ ಹನುಮೇಶ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ನಿಲ್ಲಿಸಿ, ವಿಚಾರಣೆ ಮಾಡಿದ್ದಾನೆ. ಇಲ್ಲಿ ಗಂಧದ ಕಟ್ಟಿಗೆ ಕಳ್ಳತನವಾಗಿದೆ.ನಾನು ಅರಣ್ಯ ಇಲಾಖೆಯ ಸಿಬ್ಬಂದಿ. ಸಾಹೇಬರ ಬಳಿ ಬನ್ನಿ ಎಂದು ಕರೆದುಕೊಂಡು ಹೋಗಿ, ಮಾರ್ಗಮಧ್ಯದಲ್ಲಿ .49 ಸಾವಿರ ನಗದು ಹಾಗೂ 2 ಬಂಗಾರದ ಉಂಗುರ ದೋಚಿದ್ದಾರೆ ಎನ್ನಲಾಗಿದೆ. ಹನುಮೇಶ ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಈ ಕುರಿತು ದೂರು ನೀಡಿದ್ದರು. ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow Us:
Download App:
  • android
  • ios