ನಟಿ ಉಮಾಶ್ರೀ ಅವರ ಮನೆ ಬಾಗಿಲು ಕಳ್ಳತನ ಮಾಡಿದ್ದ ಆರೋಪಿಗಳನ್ನ ಒಂದು ವಾರದಲ್ಲಿಯೇ  ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ, (ನ.08) : ಮಾಜಿ ಸಚಿವೆ , ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಬಾಗಲಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ. 

Add Asianetnews Kannada as a Preferred SourcegooglePreferred

ಬಂಧಿತ ಆರೋಪಿಗಳನ್ನು ಯಲ್ಲಪ್ಪರೆಡ್ಡಿ, ದುರ್ಗಪ್ಪ ವಾಲ್ಮೀಕಿ ಎಂದು ಗುರುತಿಸಲಾಗಿದೆ. ಇನ್ನು ಬಂಧಿತರಿಂದ 1,94000 ರೂಪಾಯಿ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ ಮನೆ ದರೋಡೆ, ಲೆಕ್ಕ ಸಿಕ್ಕಿಲ್ಲ

ನವೆಂಬರ್ 2 ರಂದು ಉಮಾಶ್ರೀ ಅವರ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಮನೆಯಲ್ಲಿ ಕಳ್ಳತನವಾಗಿತ್ತು. ಈ ಬಗ್ಗೆ ಉಮಾಶ್ರೀ ಅವರು ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣ ದಾಖಲಿಸಿಕೊಂಡಿರುವ ತೇರದಾಳ ಪೊಲೀಸ್ರು, ಒಂದು ವಾರದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.