ಪೊಲೀಸ್ ಸಿಬ್ಬಂದಿ ಆತ್ಮಹತ್ಯೆಗೆ ಶರಣು/  ಬಂಟ್ವಾಳ ತಾಲೂಕು ಮಂಕಡೆ ಗ್ರಾಮದ ಲೋಕೇಶ್ ಆಚಾರ್ಯ (36) ಸುಸೈಡ್/ ಮಂಗಳೂರು ಲೋಕಾಯುಕ್ತ ಇನ್ಸ್ ಪೆಕ್ಟರ್ ಕಾರು ಚಾಲಕರಾಗಿದ್ದ ಲೋಕೇಶ್

ಹಾಸನ(ಆ. 12) ಪೊಲೀಸ್ ಸಿಬ್ಬಂದಿಯೊಬ್ಬರು ಚನ್ನರಾಯಪಟ್ಟಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚನ್ನರಾಯಪಟ್ಟಣದ ಖಾಸಗಿ ಲಾಡ್ಜ್ ನಲ್ಲಿ ಘಟನೆ ನಡೆದಿದೆ.

Add Asianetnews Kannada as a Preferred SourcegooglePreferred

ಬಂಟ್ವಾಳ ತಾಲೂಕು ಮಂಕಡೆ ಗ್ರಾಮದ ಲೋಕೇಶ್ ಆಚಾರ್ಯ (36) ಆತ್ಮಹತ್ಯೆ ಮಾಡಿಕೊಂಡಿರುವ ಕಾನ್ ಸ್ಟೇಬಲ್.

ಸುಶಾಂತ್ ಸಾವಿಗೆ ಬಹುಮುಖ್ಯ ಟ್ವಿಸ್ಟ್ ಕೊಟ್ಟ ದಾಖಲೆ

ಮಂಗಳೂರು ಲೋಕಾಯುಕ್ತ ಇನ್ಸ್ ಪೆಕ್ಟರ್ ಕಾರು ಚಾಲಕರಾಗಿ ಲೋಕೇಶ್ ಕೆಲಸ ಮಾಡುತ್ತಿದ್ದರು. ಕಳೆದ 6 ತಿಂಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಮಂಗಳವಾರ ಬೆಳಗ್ಗೆ ಲಾಡ್ಜ್ ನಲ್ಲಿ ರೂಂ ಬಾಡಿಗೆ ಪಡೆದಿದ್ದವರು ಮದ್ಯದ ಜೊತೆ ಇಲಿ ಪಾಷಾಣ ಕುಡಿದು ನಂತರ ನೇಣಿಗೆ ಶರಣಾಗಿದ್ದಾರೆ. ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.