ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ 6ನೇ ಮಹಡಿಯಿಂದ ಜಿಗಿದು ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು (ಫೆ.1): ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ 6ನೇ ಮಹಡಿಯಿಂದ ಜಿಗಿದು ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ರಾಘವೇಂದ್ರ ನಗರದ ನಿವಾಸಿ ಕರುಪ್ಪಸ್ವಾಮಿ ದಂಪತಿ ಪುತ್ರ ವಿಘ್ನೇಶ್ (19) ಮೃತ ದುರ್ದೈವಿ. ಕಾಲೇಜಿನಲ್ಲಿ ಸಂಜೆ 4 ಗಂಟೆ ಸುಮಾರಿಗೆ 6ನೇ ಮಹಡಿಗೆ ತೆರಳಿ ವಿಘ್ನೇಶ್ ಜಿಗಿದಿದ್ದಾನೆ. ಕೆಳಗೆ ಬಿದ್ದ ಕೂಡಲೇ ತೀವ್ರ ರಕ್ತಸ್ರಾವವಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಅಬ್ಬಬ್ಬಾ ಮನೆಗಳ್ಳತನ ಮಾಡಲು ಹೈದರಾಬಾದ್‌ನಿಂದ ಬೆಂಗಳೂರಿಗೆ ಕಾರಿನಲ್ಲಿ ಬರುತ್ತಿದ್ದ ಖದೀಮರು!

ತಮಿಳುನಾಡು ಮೂಲದ ಕರುಪ್ಪಸ್ವಾಮಿ , ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳ ಜತೆ ನೆಲೆಸಿದ್ದರು. ಪರಪ್ಪನ ಅಗ್ರಹಾರ ಸಮೀಪದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎನಲ್ಲಿ ಅವರ ಪುತ್ರ ವಿಘ್ನೇಶ್ ಓದುತ್ತಿದ್ದ. ಎಂದಿನಂತೆ ಮಂಗಳವಾರ ಕಾಲೇಜಿಗೆ ಬಂದಿದ್ದ ವಿಘ್ನೇಶ್, ಸಂಜೆ 4 ಗಂಟೆ ಸುಮಾರಿಗೆ ಗೆಳೆಯರ ಜತೆ ಚಹಾ ಸೇವಿಸಿ, ಬಳಿಕ ನೇರವಾಗಿ 6ನೇ ಮಹಡಿಗೆ ತೆರಳಿ ಹಠಾತ್ತನೇ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಅನಧಿಕೃತ ನೀರು ಪೂರೈಕೆಗೆ ಪ್ರತಿಭಟನೆ; 595 ನೀರಿನ ಟ್ಯಾಂಕರ್‌ಗಳ ಮೇಲೆ ಕೇಸ್ !

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.