* ಪೊಲೀಸರಿಂದಲೇ 4.9ಕೆಜಿ ಸ್ಮಗ್ಲಿಂಗ್ ಆಗುತ್ತಿದ್ದ ಚಿನ್ನ ಕಳ್ಳತನ ಪ್ರಕರಣ*  ಸಿಐಡಿ ವಶದಲ್ಲಿದ್ದ ಆರೋಪಿಗೆ ಷರತ್ತು ಬದ್ಧ ಜಾಮೀನು* ಹುಬ್ಬಳ್ಳಿ ಮೂಲದ ಕಿರಣ್ ವೀರನಗೌಡರಗೆ ಷರತ್ತುಬದ್ಧ ಜಾಮೀನು ಮಂಜೂರು* ಬೆಳಗಾವಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ

ಬೆಳಗಾವಿ(ಜೂ. 30) ಪೊಲೀಸರಿಂದಲೇ 4.9 ಕೆಜಿ ಸ್ಮಗ್ಲಿಂಗ್ ಆಗುತ್ತಿದ್ದ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಪ್ರಕರಣದ ಕಿಂಗ್ ಪಿನ್ ಎನ್ನಲಾದವರಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ.

Add Asianetnews Kannada as a Preferred SourcegooglePreferred

ಹುಬ್ಬಳ್ಳಿ ಮೂಲದ ಕಿರಣ್ ವೀರನಗೌಡರಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ. ಬೆಳಗಾವಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. ನ್ಯಾಯಾಧೀಶ ಎನ್.ವಿ. ವಿಜಯ್ ಪೀಠ ಜಾಮೀನು ನೀಡಿದೆ.

ಫುಲ್ ಟೈಟಾಗಿ ಕಳ್ಳತನಕ್ಕೆ ಇಳಿಯುತ್ತಿದ್ದ ಕಳ್ಳ ಸಿಕ್ಕಿಬಿದ್ದ

3 ಲಕ್ಷ ವೈಯಕ್ತಿಕ ಬಾಂಡ್ ಹಾಗೂ 15 ದಿನಕ್ಕೊಮ್ಮೆ ಸಿಐಡಿ ತನಿಖೆಗೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಿಡಿಯೇಟರ್ ಆಗಿ ಕೆಲಸ ಮಾಡಿದ್ದ ಆರೋಪ ಕಿರಣ್ ಮೇಲೆ ಇದೆ. ಜೂನ್ 6 ಕ್ಕೆ ಹುಬ್ಬಳ್ಳಿಯಲ್ಲಿ ಕಿರಣ್ ವೀರನಗೌಡರನ್ನು ಸಿಐಡಿ ಬಂಧಿಸಿತ್ತು. ಬಳಿಕ ಕೋರ್ಟ್‌ಗೆ ಹಾಜರುಪಡಿಸಿ ವಶಕ್ಕೆ ಪಡೆದಿತ್ತು.