Belagavi Murder ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ ವಿಚಾರದಲ್ಲಿ ನಡೆದ ಜಗಳದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಬೆಳಗಾವಿ (ಸೆ.4): ಜಿಲ್ಲೆಯ ಗೋಕಾಕ್‌ಕ ಮಮದಾಪುರದಲ್ಲಿ ಬೆಳ್ಳಂಬೆಳಗ್ಗೆಯೇ ಬೀಕರ ಕೊಲೆ ನಡೆದಿದೆ. ದೇವಸ್ಥಾನದ ಕಟ್ಟೆ ಮೇಲೆ ಮಲಗಿದ್ದವನ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳು ಇನ್ನೂ ಬೀಕರವಾಗಿದೆ. ಮಮದಾಪುರ ಗ್ರಾಮದ 47 ವರ್ಷದ ಮಡ್ಡೆಪ್ಪ ಯಲ್ಲಪ್ಪ ಬಾನಸಿ ಮೃತ ವ್ಯಕ್ತಿ. ಬೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದ ಮಡ್ಡೆಪ್ಪ ಮಲಗಿದ್ದರು. ಈ ವೇಳೆ ದೇವಸ್ಥಾನಕ್ಕೆ ಆಗಮಿಸಿದ್ದ ಆರೋಪಿ ಬೀರಪ್ಪ ಮಾರಕಾಸ್ತ್ರದಲ್ಲಿ ಮಡ್ಡೆಪ್ಪನ ಮೇಲೆ ದಾರುಣವಾಗಿ ಹಲ್ಲೆ ಮಾಡಿದ್ದಾರೆ. ತೀವ್ರ ಹಲ್ಲೆಗೆ ಒಳಗಾಗಿದ್ದ ಮಡ್ಡೆಪ್ಪನನ್ನು ಈ ವೇಳೆಗೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ.

Add Asianetnews Kannada as a Preferred SourcegooglePreferred

ರಾಜಭವನ ಒತ್ತಡದಲ್ಲಿ ಕೆಲಸ ಮಾಡುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಆಸ್ತಿ ಕಾರಣಕ್ಕೆ ಇಬ್ಬರ ಮಧ್ಯೆ ವ್ಯಾಜ್ಯ ಇದ್ದ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಮಡ್ಡೆಪ್ಪ ಸಾವು ಕಂಡಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೊಲೆಯ ಬಳಿಕ ಆರೋಪಿಯನ್ನು ಕಂಬಕ್ಕೆ ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಚಿಕ್ಕೋಡಿ: ಮರಕ್ಕೆ ನೇಣು ಬಿಗಿದುಕೊಂಡು 60 ವರ್ಷದ ವೃದ್ಧ ಆತ್ಮಹತ್ಯೆ