ಬಾಡಿಗೆ ಕಾರಿನ ಚಾಲಕರಾಗಿದ್ದ ಮೃತ ಪರಮೇಶ್ವರ| ಗುತ್ತಿಗೆದಾರರನ್ನು ಕೊಪ್ಪಳಕ್ಕೆ ಕರೆದುಕೊಂಡು ಬಂದಿದ್ದ ಕಾರು ಚಾಲಕ| ಕೌಟುಂಬಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ| ಈ ಸಂಬಂಧ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು| 

ಕೊಪ್ಪಳ(ಮಾ.17): ನಗರದ ಖಾಸಗಿ ಲಾಡ್ಜ್‌ವೊಂದರಲ್ಲಿ ಬೆಂಗಳೂರು ಮೂಲದ ಕಾರು ಚಾಲಕರೊಬ್ಬರು ಮಂಗಳವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೃತರನ್ನು ಪರಮೇಶ್ವರ ಎಂದು ಗುರುತಿಸಲಾಗಿದ್ದು, ಇವರು ಬಾಡಿಗೆ ಕಾರಿನ ಚಾಲಕರಾಗಿದ್ದರು. ಗುತ್ತಿಗೆದಾರರನ್ನು ಕೊಪ್ಪಳಕ್ಕೆ ಕರೆದುಕೊಂಡು ಬಂದಿದ್ದರು ಎದು ಹೇಳಲಾಗುತ್ತಿದೆ.

ಪ್ರೀತಿಸಿದ್ರು ಬೈಕ್‌ಗಾಗಿ ವರನ ಪಟ್ಟು, ನೊಂದ ಯುವತಿ ಸುಸೈಡ್

ಕೌಟುಂಬಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅವರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.