ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ದೊಣ್ಣೆಯಿಂದ ಹೊಡೆದು ಪತ್ನಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ತಮ್ಮನಾಯಕಹಳ್ಳಿಯಲ್ಲಿ ನಡೆದಿದೆ.

ಆನೇಕಲ್‌ (ನ.26): ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ದೊಣ್ಣೆಯಿಂದ ಹೊಡೆದು ಪತ್ನಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ತಮ್ಮನಾಯಕಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮಮ್ಮ(40) ಪತಿಯಿಂದಲೇ ಹತ್ಯೆಯಾದ ಮಹಿಳೆ. ಮಹದೇವಯ್ಯ(45) ಕೊಲೆಗೈದ ಪತಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮದುವೆಯಾಗಿ ಅನ್ಯೋನ್ಯ, ಪರಸ್ಪರ ಹೊಂದಾಣಿಕೆ ಪ್ರೀತಿಯಿಂದ ಇದ್ದ ಕುಟುಂಬ. ಪತಿ-ಪತ್ನಿ ಸುಖ ದಾಂಪತ್ಯಕ್ಕೆ ಆರು ಜನ ಮಕ್ಕಳಿದ್ದಾರೆ. ಆನೇಕಲ್‌ನ ಸ್ಟ್ರೈಡ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಮಹದೇವಯ್ಯ. ಇತ್ತ ಮನೆಯಲ್ಲಿ ಖಾಲಿ ಇರಲಾರದೆ ಗಾರೇ ಕೆಲಸ ಮಾಡಿಕೊಂಡಿದ್ದ ಪತ್ನಿ ಲಕ್ಷ್ಮಮ್ಮ. ಆದರೆ ಇದೇ ದಾಂಪತ್ಯಕ್ಕೆ ಮುಳುವಾಗಿದೆ. ಗಾರೇ ಕೆಲಸ ಮಾಡುವ ವ್ಯಕ್ತಿ ಪರಿಚಯವಾಗಿ ಅವನೊಂದಿಗೆ ಲಕ್ಷ್ಮಮ್ಮ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಈ ವಿಚಾರ ಇಡೀ ತಮ್ಮನಾಯಕನಹಳ್ಳಿ ಗ್ರಾಮದ ಜನರಿಗೆ ತಿಳಿದು ಮಹದೇವಯ್ಯಗೆ ಅವಮಾನ ಉಂಟುಮಾಡಿತ್ತು ಎನ್ನಲಾಗಿದೆ. 

ಬೆಂಗಳೂರು: ಟ್ರಾಫಿಕ್ ಸಿಗ್ನಲ್ ಬ್ಯಾಟರಿ ಕದಿಯುತ್ತಿದ್ದ ಖತರ್ನಾಕ್‌ ಖದೀಮರ ಬಂಧನ

ಗ್ರಾಮದ ಜನರು ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಪದೇಪದೆ ಮಾತಾಡಿಕೊಳ್ಳುತ್ತಿರುವುದು ಮಹದೇವಯ್ಯನ ಕಿವಿಗೆ ಬಿದ್ದಿದೆ. ಇದರಿಂದಾಗಿ ಗ್ರಾಮದಲ್ಲಿ ತಲೆಯೆತ್ತಿ ಓಡಾಡದಂತಾಗಿದೆ. ಇದೇ ಕಾರಣಕ್ಕೆ ಹಲವು ಬಾರಿ ಲಕ್ಷ್ಮಮ್ಮ ಹಾಗೂ ಮಹದೇವಯ್ಯ ನಡುವೆ ಗಲಾಟೆ ನಡೆದಿದೆ. ಪದೇ ಪದೆ ಜಗಳ, ಪತ್ನಿಯ ಅಕ್ರಮ ಸಂಬಂಧದಿಂದ ಮನನೊಂದು ಪತ್ನಿಯನ್ನು ಮುಗಿಸಲು ನಿರ್ಧಾರ ಮಾಡಿರುವ ಮಹದೇವಯ್ಯ. ಪತ್ನಿ ಮಲಗಿದ್ದಾಗಲೇ ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಕೊಲೆ ಮಾಹಿತಿ ತಿಳಿದು ಆನೇಕಲ್ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು.

ಬೆಂಗಳೂರು: ದಂಡ ತಪ್ಪಿಸಲು ಬೈಕ್‌ ನಂಬರ್‌ ಪ್ಲೇಟ್‌ಗೆ ಸ್ಟಿಕ್ಕರ್‌ ಅಂಟಿಸಿದ ಭೂಪನ ವಿರುದ್ಧ ಕೇಸ್‌