userpic
user icon
0 Min read

ರೇ*ಪ್ ಕೇಸ್ ಕೊಡಲು ಬಂದ ತಾಯಿ ಮಗಳ ಮೇಲೆ ಎಸ್‌ಐ ದರ್ಪ, ₹50 ಸಾವಿರ ದಂಡ

Bengaluru SI fined Rs 50000 for arrogance towards mother and daughter who came to file rape case rav

Synopsis

ಕಿರುಕುಳ ಸಂಬಂಧ ದೂರು ನೀಡಲು ತೆರಳಿದ ತಾಯಿ-ಮಗಳಿಗೆ ಪೊಲೀಸ್ ಠಾಣೆಯಲ್ಲಿ ದರ್ಪ ತೋರಿದ ಆರೋಪದ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್‌ಗೆ ₹50 ಸಾವಿರ ದಂಡ ವಿಧಿಸಿ, ಶಿಸ್ತು ಕ್ರಮ ಜರುಗಿಸಲು ರಾಜ್ಯ ಮಾನವ ಹಕ್ಕುಗಳ ಆಯೋಗ ಶಿಫಾರಸು ಮಾಡಿದೆ.

ಬೆಂಗಳೂರು (ಏ.17): ದೌರ್ಜನ್ಯ ಸಂಬಂಧ ಸಂತ್ರಸ್ತ ತಾಯಿ-ಮಗಳಿಂದ ದೂರು ಸ್ವೀಕರಿಸದೆ ಠಾಣೆಯಲ್ಲಿ ನಿಂದಿಸಿ ದರ್ಪ ತೋರಿಸಿದ ಆರೋಪದ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್‌ ಹರೀಶ್ ಅವರಿಗೆ ₹50 ಸಾವಿರ ದಂಡ ವಿಧಿಸಿದಲ್ಲದೆ ಶಿಸ್ತು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗ ಶಿಫಾರಸು ಮಾಡಿದೆ.

ಚೇಳೂರು ಠಾಣಾ ವ್ಯಾಪ್ತಿಯಲ್ಲಿ ತಮ್ಮ 13 ವರ್ಷದ ಮಗಳ ಮೇಲೆ ದೌರ್ಜನ್ಯ ನಡೆದಿದೆ ಎಂದು ದೂರು ಕೊಡಲು ತೆರಳಿದ ತಾಯಿ ಹಾಗೂ ಮಗಳ ಮೇಲೆ ಪಿಎಸ್‌ಐ ಹರೀಶ್, ನಿವೃತ್ತ ಪಿಎಸ್‌ಐ ಪಾಪಣ್ಣ ಅವರು ದೌಲತ್ತಿನಿಂದ ನಡೆದುಕೊಂಡಿದ್ದಾರೆ. ಠಾಣೆಗೆ ದೂರು ಕೊಡಲು ಬಂದರೆ ಒದ್ದು ಬಿಡುತ್ತೇನೆ ಎಂದು ಹರೀಶ್ ಬೆದರಿಸಿದ್ದರು. ಈ ಬಗ್ಗೆ ನೊಂದ ತಾಯಿ ದೂರಿನನ್ವಯ ಠಾಣೆಯ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಸಂತ್ರಸ್ತರ ಮೇಲೆ ಪಿಎಸ್‌ಐ ಹರೀಶ್‌ ದರ್ಪ ತೋರಿಸಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಹಲ್ಲೆಯನ್ನು ಗ್ಯಾಂಗ್‌ ರೇ*ಎಂದು ಕಥೆ ಕಟ್ಟಿದ ಮಹಿಳೆ: ಕೇಸ್‌ ದಾಖಲು!

ಈ ಮಾಹಿತಿ ಮೇರೆಗೆ ಆರೋಪಿತ ಪಿಎಸ್‌ಐ ಹರೀಶ್‌ ಹಾಗೂ ಈ ಹಿಂದೆ ಚೇಳೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಪಾಪಣ್ಣ ಅವರಿಗೆ ₹50 ಸಾವಿರ ದಂಡ ಆಯೋಗ ದಂಡ ವಿಧಿಸಿದೆ. ಅಲ್ಲದೆ ಈ ಇಬ್ಬರು ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಹಾಗೂ ಸಂತ್ರಸ್ತರಿಗೆ ಆರೋಪಿಗಳಿಂದ ವಸೂಲಿ ಮಾಡಿದ ಹಣವನ್ನು ಪರಿಹಾರ ರೂಪದಲ್ಲಿ ನೀಡುವಂತೆ ಸರ್ಕಾರಕ್ಕೆ ಮಾನವ ಹಕ್ಕುಗಳ ಆಯೋಗ ಸೂಚಿಸಿದೆ.

ತಮ್ಮ ಅತ್ತೆ ನಾರಾಯಣಮ್ಮ, ಮಾವ ಪರಮಾತ್ಮ ಹಾಗೂ ಮೈದುನ ಮಧು ಅವರ ಮಾತು ಕೇಳಿ ಪಿಎಸ್‌ಐ ದೂರು ಸ್ವೀಕರಿಸಲು ವಿಳಂಬ ಮಾಡಿದರು. ಈ ಘಟನೆ ಕುರಿತು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಯಿತು. ಆದರೆ ಠಾಣೆಗೆ ಹೋದರೆ ಮನಬಂದಂತೆ ನಿಂದಿಸಿ ಅವಮಾನಿಸಿ ಪಿಎಸ್‌ಐ ಕಳುಹಿಸಿದ್ದರು ಎಂದು ಸಂತ್ರಸ್ತರು ಆಪಾದಿಸಿದ್ದರು.

Download App

Latest Videos