Food delivery boy assaulted incident in Bengaluru, ಬೆಂಗಳೂರಿನಲ್ಲಿ ಫುಡ್ ಡೆಲಿವರಿ ತಡವಾಗಿದ್ದಕ್ಕೆ ಜೊಮೊಟೋ ಡೆಲಿವರಿ ಬಾಯ್ ಮೇಲೆ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು(ಸೆ.20): ಫುಡ್ ಡೆಲಿವರಿ ಕೊಡೋದು ತಡವಾಯ್ತು ಎಂದು ಫುಡ್‌ ಡೆಲಿವರಿ ಬಾಯ್ ಮೇಲೆ ಹಲ್ಲೆ ಘಟನೆ ಸಂಬಂಧ ಹಲ್ಲೆ ನಡೆಸಿದ ಆರೋಪಿಗಳನ್ನ ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

Add Asianetnews Kannada as a Preferred SourcegooglePreferred

ಮುಬಾರಕ್ ಮತ್ತು ಆದಿಲ್ ಹುಸೇನ್ ಬಂಧಿತ ಆರೋಪಿಗಳು. ಆರೋಪಿಗಳು ಜೊಮೊಟೋದ ಮೂಲಕ ಫುಡ್ ಆರ್ಡರ್ ಮಾಡಿದ್ದರು.

ಫುಡ್‌ ಡೆಲಿವರಿ ತಡವಾಗಿದ್ದ ಹಲ್ಲೆ:

ಬೆಂಗಳೂರಿನ ಶಾಮಣ್ಣ ಗಾರ್ಡನ್‌ನಲ್ಲಿ ಕಳೆದ ಭಾನುವಾರ ರಾತ್ರಿ ಘಟನೆ ನಡೆದಿತ್ತು. ಮುಬಾರಕ್ ರಾತ್ರಿ 7 ಗಂಟೆಗೆ ಫುಡ್ ಆರ್ಡರ್ ಮಾಡಿದ್ದರು. ಆದರೆ ಆದರೆ, ಚಾಂದ್ ಪಟೇಲ್ ರಾತ್ರಿ 8 ಗಂಟೆಗೆ ಆಹಾರವನ್ನು ತಲುಪಿಸಿದಾಗ, ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಮುಬಾರಕ್ ಮತ್ತು ಆದಿಲ್, ಚಾಂದ್‌ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಳಿಕ, ಖಾಲಿ ಕ್ಯಾನ್ ಮತ್ತು ಪ್ಲಾಸ್ಟಿಕ್ ಚೇರ್‌ನಿಂದ ಚಾಂದ್‌ಗೆ ಆರೋಪಿಗಳಿಬ್ಬರೂ ಗಂಭೀರವಾಗಿ ಹಲ್ಲೆ ನಡೆಸಿದ್ದರು.

ಈ ದಾಳಿಯಿಂದ ಗಾಯಗೊಂಡ ಚಾಂದ್ ಪಟೇಲ್, ಬ್ಯಾಟರಾಯನಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಮುಬಾರಕ್ ಮತ್ತು ಆದಿಲ್ ಹುಸೇನ್‌ನನ್ನು ಬಂಧಿಸಿ ಕ್ರಮ ಜರುಗಿಸಿದ್ದಾರೆ.

ಈ ಘಟನೆಯಿಂದ ಫುಡ್ ಡೆಲಿವರಿ ಕಾರ್ಮಿಕರ ಸುರಕ್ಷತೆ ಕುರಿತಂತೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.