ಖಿನ್ನತೆಯಿಂದ ಬಳಲುತ್ತಿದ್ದ ಸೋನಾಲಿ ಕೆಲ ದಿನಗಳ ಹಿಂದೆ ಮೆಟ್ಟಿಲಿನಿಂದ ಬಿದ್ದು ಗಾಯಗೊಂಡು ಆಸ್ಪತ್ರೆಗೂ ದಾಖಲಾಗಿದ್ದರು. ಗುರುವಾರವಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ನಂತರ ರೂಮಿನಲ್ಲಿ ಫ್ಯಾನಿಗೆ ನೇಣುಹಾಕಿಕೊಂಡಿದ್ದಾರೆ.

ಮಣಿಪಾಲ(ಸೆ.16): ಇಲ್ಲಿನ ಕೆನರಾ ಬ್ಯಾಂಕ್ ಶಾಖೆಯ ಸಹಾಯಕ ವ್ಯವಸ್ಥಾಪಕಿಯಾಗಿದ್ದ ಸೋನಾಲಿ (35) ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಇಲ್ಲಿನ ವಿಭುದಪ್ರಿಯನಗರದ ಫ್ಲಾಟೊಂದರಲ್ಲಿ ವಾಸವಿದ್ದು, 2022ರಲ್ಲಿ ಪತಿಯಿಂದ ವಿಚ್ಛೇದನ ಪಡೆದುಕೊಂಡಿದ್ದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಖಿನ್ನತೆಯಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆ ಮೆಟ್ಟಿಲಿನಿಂದ ಬಿದ್ದು ಗಾಯಗೊಂಡು ಆಸ್ಪತ್ರೆಗೂ ದಾಖಲಾಗಿದ್ದರು. ಗುರುವಾರವಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ನಂತರ ರೂಮಿನಲ್ಲಿ ಫ್ಯಾನಿಗೆ ನೇಣುಹಾಕಿಕೊಂಡಿದ್ದಾರೆ.

ತುಮಕೂರು: ಹೆಂಡ್ತಿ ಕಾಟಕ್ಕೆ ತಾಳಲಾರದ ನಮ್ಮ ಮೆಟ್ರೋ ಎಂಜಿನಿಯರ್ ಸಾವಿಗೆ ಶರಣು

ಸಂಜೆ 6 ಗಂಟೆಗೆ ಆಕೆಯ ಹೆತ್ತವರು ಕರೆ ಮಾಡಿದಾಗ ಕರೆ ಸ್ವೀಕರಿಸಲಿಲ್ಲ. ರಾತ್ರಿ 8ಕ್ಕೆ ಪ್ಲಾಟಿಗೆ ಬಂದು ನೋಡಿದಾಗ ಒಳಗಿನಿಂದ ಚಿಲಕ ಹಾಕಿತ್ತು. ಬಲವಂತವಾಗಿ ಬಾಗಿಲು ತೆರೆದಾಗ ಬೆಡ್ ರೂಮಿನಲ್ಲಿ ಫ್ಯಾನಿಗೆ ಚೂಡಿದಾರದ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.