Asianet Suvarna News Asianet Suvarna News

ಬೆಂಗಳೂರು: ಮಟ್ಕಾ ದಂಧೆಕೋರರ ಮೇಲೆ ಸಿಸಿಬಿ ದಾಳಿ: ಇಬ್ಬರ ಸೆರೆ

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ವಿಶೇಷ ತನಿಖಾ ದಳದ ಪೊಲೀಸರು ಸಾರ್ವಜನಿಕರಿಂದ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಕಲ್ಯಾಣಿ ಮತ್ತು ಶ್ರೀದೇವಿ ಹೆಸರಿನ ಮಟ್ಕಾ ಜೂಜಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

CCB police attack on Matka gang 2 arrested at bengaluru rav
Author
First Published Feb 19, 2024, 7:24 AM IST | Last Updated Feb 19, 2024, 7:24 AM IST

ಬೆಂಗಳೂರು (ಫೆ.19): ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ವಿಶೇಷ ತನಿಖಾ ದಳದ ಪೊಲೀಸರು ಸಾರ್ವಜನಿಕರಿಂದ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಕಲ್ಯಾಣಿ ಮತ್ತು ಶ್ರೀದೇವಿ ಹೆಸರಿನ ಮಟ್ಕಾ ಜೂಜಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ನೀಲಸಂದ್ರದ ರೋಸ್‌ ಗಾರ್ಡನ್‌ ನಿವಾಸಿ ಅಕ್ರಂ ಪಾಷಾ(54) ಮತ್ತು ಕಾಚಾರಕನಹಳ್ಳಿಯ ವಿನೋದ್‌ ರಾಜ್‌(32) ಬಂಧಿತರು. ಆರೋಪಿಗಳಿಂದ ಒಟ್ಟು ₹15,600 ನಗದು ಹಾಗೂ ಒಂದು ಮೊಬೈಲ್‌ ಫೋನ್‌ ಜಪ್ತಿ ಮಾಡಲಾಗಿದೆ.

ಅಪ್ತಾಪ್ತೆಗೆ ಮುತ್ತು ಕೊಟ್ಟವನಿಗೆ 3 ವರ್ಷ ಜೈಲು ಶಿಕ್ಷೆ, ಏನಿದು ಪ್ರಕರಣ?

ಅಶೋಕನಗರ ಠಾಣಾ ವ್ಯಾಪ್ತಿಯ ನೀಲಸಂದ್ರದ ಅಂಗಡಿ ಎದುರು ವ್ಯಕ್ತಿಯೊಬ್ಬ ಸಾರ್ವಜನಿಕರಿಂದ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಕಲ್ಯಾಣಿ ಮತ್ತು ಶ್ರೀದೇವಿ ಹೆಸರಿನ ಮಟ್ಕಾ ಜೂಜಾಟ ನಡೆಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿ ಅಕ್ರಂ ಪಾಷಾನನ್ನು ಬಂಧಿಸಿದ್ದಾರೆ. ₹10,500 ನಗದು ಜಪ್ತಿ ಮಾಡಲಾಗಿದೆ. ಈ ಸಂಬಂಧ ಅಶೋಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಬಾಣಸವಾಡಿ ಠಾಣಾ ವ್ಯಾಪ್ತಿಯ ಕೆಎಚ್‌ಬಿ ಕ್ವಾಟ್ರಸ್‌ ಬಳಿ ವ್ಯಕ್ತಿಯೊಬ್ಬ ಸಾರ್ವಜನಿಕರಿಂದ ಹಣವನನ್ನು ಪಣವಾಗಿ ಕಟ್ಟಿಸಿಕೊಂಡು ಮಟ್ಕಾ ಜೂಜಾಟ ನಡೆಸುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿ ವಿನೋದ್‌ ರಾಜ್‌ನನ್ನು ಬಂಧಿಸಲಾಗಿದೆ. ₹5,100 ನಗದು ಜಪ್ತಿ ಮಾಡಲಾಗಿದೆ. ಬಾಣಸವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios