ಲಾಕ್‌ಡೌನ್‌ ವೇಳೆ ಸಂಕಷ್ಟಕ್ಕೆ ಸಿಲುಕಿದ್ದವಳಿಗೆ ಮೋಸ| ಮೊಬೈಲ್‌ ಕರೆಗಳ ಮಾಹಿತಿ ಆಧರಿಸಿ ಆರೋಪಿ ಪತ್ತೆಗೆ ಹುಡುಕಾಟ| ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದ ಘಟನೆ| 

ಬೆಂಗಳೂರು(ನ.05): ಲಾಕ್‌ಡೌನ್‌ ವೇಳೆ ಸಂಕಷ್ಟಕ್ಕೆ ಸಿಲುಕಿದ್ದ ರೂಪದರ್ಶಿಯೊಬ್ಬಳಿಗೆ ಮಾಡೆಲಿಂಗ್‌ ಕ್ಷೇತ್ರದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ 3 ಲಕ್ಷ ಪಡೆದು ಮಹಿಳೆಯೊಬ್ಬಳು ವಂಚಿಸಿರುವ ಘಟನೆ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

Add Asianetnews Kannada as a Preferred SourcegooglePreferred

ಮುಂಬೈ ಮೂಲದ 29 ವರ್ಷದ ರೂಪದರ್ಶಿ ಮೋಸ ಹೋಗಿದ್ದು, ಸುಫಿಯಾ ಎಂಬಾಕೆ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದಾಳೆ. ಈ ದೂರಿನನ್ವಯ ತನಿಖೆ ಕೈಗೆತ್ತಿಕೊಂಡಿರುವ ಬ್ಯಾಟರಾಯನಪುರ ಠಾಣೆ ಪೊಲೀಸರು, ಮೊಬೈಲ್‌ ಕರೆಗಳ ಮಾಹಿತಿ ಆಧರಿಸಿ ಆರೋಪಿ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.

ಸೇನೆ, ಪೊಲೀಸ್‌ ಅಧಿಕಾರಿಗಳ ಹೆಸರಲ್ಲಿ ವಂಚಿಸುತ್ತಿದ್ದವರ ಬಂಧನ

ವಿಠಲ್‌ ಮಲ್ಯ ರಸ್ತೆ ರಮಣಶ್ರೀ ಹೋಟೆಲ್‌ನಲ್ಲಿ ನೆಲೆಸಿದ್ದ ರೂಪದರ್ಶಿ, ಲಾಕ್‌ಡೌನ್‌ ವೇಳೆ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಳು. ಆಗ ಪರಿಚಯವಾದ ಸುಫಿಯಾ ಅಲಿಯಾಸ್‌ ಮಾಯಾ, ನಿನಗೆ ಮಾಡೆಲಿಂಗ್‌ ಅವಕಾಶ ಕೊಡಿಸುವುದಲ್ಲದೆ ಹೋಟೆಲ್‌ನಲ್ಲಿ ವಾಸ್ತವ್ಯಕ್ಕೂ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾಳೆ. ಇದನ್ನು ನಂಬಿದ ರೂಪದರ್ಶಿ, ಹೋಟೆಲ್‌ ಖಾಲಿ ಮಾಡಿಕೊಂಡು ಕ್ಯಾಬ್‌ನಲ್ಲಿ ಸದ್ದುಗುಂಟೆಪಾಳ್ಯಕ್ಕೆ ತೆರಳಿ ಸುಫಿಯಾಳನ್ನು ಭೇಟಿಯಾಗಿದ್ದಳು. ಬಳಿಕ ತನ್ನ ಕಾರಿನಲ್ಲಿ ಹತ್ತಿಸಿಕೊಂಡ ವಂಚಕಿ, ರೂಪದರ್ಶಿಯನ್ನು ಎಲ್ಲೆಡೆ ಸುತ್ತಾಡಿಸಿದ್ದಾಳೆ. ಆಗ ತಾನು ನನ್ನಮ್ಮನ ಬ್ಯಾಂಕ್‌ ಖಾತೆಗೆ 3 ಲಕ್ಷ ಜಮೆ ಮಾಡಬೇಕಿದೆ. 

ಎಟಿಎಂ ಬೂತ್‌ ಇದ್ದರೇ ಹೇಳಿ ಎಂದು ಮಾಡೆಲ್‌ ಸಹಾಯ ಕೋರಿದ್ದಳು. ಆ ವೇಳೆ ಮೈಸೂರು ರಸ್ತೆ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದ ಬಳಿಗೆ ಸಂತ್ರಸ್ತೆಯನ್ನು ರೂಪದರ್ಶಿ ಕರೆತಂದಿದ್ದಾಳೆ. ತಡರಾತ್ರಿ 2 ಗಂಟೆಯಲ್ಲಿ ಕಾರು ನಿಲ್ಲಿಸಿ ಡಿಕ್ಕಿಯಲ್ಲಿ ಬ್ಲಾಂಕೆಟ್‌ ಇದೆ. ತೆಗೆದುಕೊಂಡು ಬಾ ಎಂದಿದ್ದಾಳೆ. ಇತ್ತ ರೂಪದರ್ಶಿ ತನ್ನ ಬಳಿಯಿದ್ದ ಹಣ, ಮೊಬೈಲ್‌ ಬ್ಯಾಗನ್ನು ಕಾರಿನಲ್ಲಿಯೇ ಬಿಟ್ಟು ಕೆಳಗೆ ಇಳಿದ ಕೂಡಲೇ ಆರೋಪಿ, ಕಾರು ಚಲಾಯಿಸಿಕೊಂಡು ಪರಾರಿಯಾಗಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.