Chikkamagaluru provocative post case: ಚಿಕ್ಕಮಗಳೂರಿನಲ್ಲಿ ಗೋಹತ್ಯೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ, 'ಗೋ ಹಂತಕರೆದೆಯ ಸೀಳಿರಿ' ಎಂಬ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಬಿಜೆಪಿ ಮತ್ತು ಸಂಘಪರಿವಾರದ ಮುಖಂಡರ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. 

ಚಿಕ್ಕಮಗಳೂರು,(ಅ.16): ಗೋಹತ್ಯೆಯ ವಿರುದ್ಧ ನಗರದಲ್ಲಿ ನಡೆದ ಬೃಹತ್ ಪ್ರತಿಭಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಾಕಿದ ಆರೋಪ ಹಿನ್ನೆಲೆ ಬಿಜೆಪಿ ಮತ್ತು ಸಂಘಪರಿವಾರದ ಮುಖಂಡರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.

Add Asianetnews Kannada as a Preferred SourcegooglePreferred

ಹಿಂದೂಗಳೇ ಒಂದಾಗಿ ಬನ್ನಿ.. ಪ್ರಚೋದನಕಾರಿ ಪೋಸ್ಟ್

ನಿನ್ನೆ ನಗರದಲ್ಲಿ ಹಿಂದೂ ಕಾರ್ಯಕರ್ತರು ಗೋಹತ್ಯೆಯನ್ನು ಖಂಡಿಸಿ ಆಯೋಜಿಸಿದ್ದ ಪ್ರತಿಭಟನೆಗೆ ಕರೆ ನೀಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿತ್ತು. ಈ ಪೋಸ್ಟ್‌ನಲ್ಲಿ ಖಡ್ಗದ ಚಿತ್ರವನ್ನು ಬಳಸಿ, ಬಲಿಗೆ ಹಸಿದಿಹ ಶಸ್ತ್ರ,ಹಿರಿಯುತ ಗೋ ಹಂತಕರೆದೆಯ ಸೀಳಿರಿ' ಗೋಮಾತೆ ರಕ್ಷಣೆಗೆ ಹಿಂದುಗಳೇ ಒಂದಾಗಿ ಬನ್ನಿ ಎಂದು ಕರೆ ನೀಡಲಾಗಿತ್ತು.

ಇದನ್ನೂ ಓದಿ:ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ದಾನಪ್ಪ ನರೋಣಿ 9 ದಿನ ಪೊಲೀಸ್ ಕಸ್ಟಡಿಗೆ

ಬಿಜೆಪಿ ಸಂಘಪರಿವಾದ ಮುಖಂಡರ ವಿರುದ್ಧ ಕೇಸ್:

ಇದು ಸಾಮುದಾಯಿಕ ಘರ್ಷಣೆಗೆ ಕಾರಣವಾಗುವ ಪ್ರಚೋದನಕಾರಿ ಪೋಸ್ಟ್ ಎಂದು ಆರೋಪಿಸಿ ಪೊಲೀಸರು ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂತೋಷ್, ಹಾಸನ ವಿಭಾಗದ ಭಜರಂಗದಳ ಸಹ-ಸಂಚಾಲಕ ಶಾಮ್ ಸೇರಿದಂತೆ ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆಯಿಂದ ಜಿಲ್ಲೆಯಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.