Asianet Suvarna News Asianet Suvarna News

Road Accident: ನನ್ನಮ್ಮ ಸೂಪರ್‌ಸ್ಟಾರ್‌ ಬಾಲಕಿ ಸಮನ್ವಿ ದಾರುಣ ಸಾವು, ಅಮ್ಮನಿಗೂ ಪೆಟ್ಟು

* ಅತಿ ವೇಗದಿಂದ ಬಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ

*  ತಾಯಿ ಜೊತೆ ಸ್ಕೂಟರ್ ನ ಹಿಂಬದಿ  ಕುಳಿತಿದ್ದ ಆರು ವರ್ಷದ ಬಾಲಕಿ ಸಾವು

* ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವು
* ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತೆರಳ್ತಿದ್ದಾಗ ಸಂಜೆ 4.30 ರ ವೇಳೆ ಅಪಘಾತ

colors kannada nanna amma superstar reality show participant Samanvi dies in Road Accident Bengaluru mah
Author
Bengaluru, First Published Jan 13, 2022, 9:42 PM IST

ಬೆಂಗಳೂರು(ಜ. 13) ಭೀಕರ ರಸ್ತೆ ಅಪಘಾತದಲ್ಲಿ(Road Accident)  ನನ್ನಮ್ಮ ಸೂಪರ್ ಸ್ಟಾರ್ (Nanna Amma Superstar) ರಿಯಾಲಿಟಿ ಶೋದಲ್ಲಿ ( Reality Show) ಕಾಣಿಸಿಕೊಳ್ಳುತ್ತಿದ್ದ ಪುಟಾಣಿ ದಾರುಣ ಸಾವು ಕಂಡಿದ್ದಾಳೆ. ಅತಿ ವೇಗದಿಂದ ಬಂದು ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿಯಾಗಿದೆ  ತಾಯಿ (Mother) ಜೊತೆ ಸ್ಕೂಟರ್ ನ ಹಿಂಬದಿ  ಕುಳಿತಿದ್ದ ಆರು ವರ್ಷದ ಬಾಲಕಿ ಸಮನ್ವಿ(6) ಸಾವು ಕಂಡಿದ್ದಾಳೆ. ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತೆರಳ್ತಿದ್ದಾಗ ಸಂಜೆ 4.30 ರ ವೇಳೆ ಘೋರ ಅಪಘಾತವಾಗಿದೆ.

ತಾಯಿ ಅಮೃತಾ ನಾಯ್ಡುಗೆ ಅಪಘಾತ ವೇಳೆ ಗಾಯವಾಗಿದೆ  ಮರಣೋತ್ತರ ಪರೀಕ್ಷೆಗೆ ಬಾಲಕಿ ಮೃತದೇಹ ಕಿಮ್ಸ್ ಗೆ ಕಳುಹಿಸಿಕೊಡಲಾಗಿದೆ.. ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ವಶಕ್ಕೆ ಪಡೆದ ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು. ಕೇಸು ದಾಖಲಿಸಿಕೊಂಡಿದ್ದಾರೆ.

ಮ್ಯಾಜಿಕ್ ಮಾಡುವ ಮಾಸ್ಟರ್ ಆನಂದ್ ಪುತ್ರಿ

ಶಾಪಿಂಗ್ ಮುಗಿಸಿಕೊಂಡು ಮಗುವನ್ನ ಬೈಕ್ ಹಿಂಬದಿ ಕುರಿಸಿಕೊಂಡು ತಾಯಿ ಹೋಗುತ್ತಿದ್ದರು ಕನಕಪುರ ರಸ್ತೆಯಲ್ಲಿರುವ ಮನೆಗೆ ಹೋಗ್ತಿದ್ದ ತಾಯಿ, ಮಗಳಿಗೆ ಯಮನಾಗಿ ಟಿಪ್ಪರ್  ಬಂದಿದೆ. ಈ ವೇಳೆ ಹಿಂಬದಿಯಿಂದ ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿದ್ದು ವೇಳೆ ಸಮನ್ವಿ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವು ಕಂಡಿದ್ದಾಳೆ.

ಅಮೃತ ನಾಯ್ಡು ಖ್ಯಾತ ಹರಿಕಥಾ ವಿದ್ವಾಂಸ ಗುರುರಾಜುಲು ನಾಯ್ಡು ಮೊಮ್ಮಗಳು. ಅಮೃತ ತಾಯಿ ಸಹ ಶೋಭಾ ಗುರುರಾಜುಲು ನಾಯ್ಡು ಹರಿಕಥಾ ವಿದ್ವಾಂಸರು.  ಕಿರುತೆರೆಯಲ್ಲಿ ಕಾಣಿಸಿಕೊಳ್ಳುವ ಅಮೃತಾಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. 

ಟೆಕ್ಕಿಗಳ ಸಾವು;  ನೈಸ್ ರಸ್ತೆಯಲ್ಲಿ ಭೀಕರ ಅಪಘಾತ (Road Accident) ಸಂಭವಿಸಿ ಸ್ಥಳದಲ್ಲಿಯೇ ನಾಲ್ವರು ಟೆಕ್ಕಿಗಳು ಸಾವು ಕಂಡಿದ್ದರು.  ಕುಮಾರಸ್ವಾಮಿ ಲೇಔಟ್‌ ಅಪಾರ್ಟ್‌ಮೆಂಟ್‌ ಬಳಿ  ಕಳೆದ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು (Death) ದುರ್ಮರಣಕ್ಕೀಡಾಗಿದ್ದರು. 

ಬನ್ನೇರುಘಟ್ಟ ಕಡೆಯಿಂದ ತುಮಕೂರು ಕಡೆ ತೆರಳುತ್ತಿದ್ದ ಕಾರಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾನ್ನಪ್ಪಿರುವುದು ಖಚಿತವಾಗಿದೆ. ಘೋರ ಅಪಘಾತದ ಪರಿಣಾಮ  ನೈಸ್‌ ರಸ್ತೆಯಲ್ಲಿ ಸುಮಾರು ಎಂಟು ಕಿ.ಮೀ.ನಷ್ಟು ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

TV Journalist Arrest: ಸುದ್ದಿ ಪ್ರಸಾರ ತಡೆಗೆ ಹಣಕ್ಕೆ ಬೇಡಿಕೆ, ಖಾಸಗಿ ವಾಹಿನಿ ಸಿಬ್ಬಂದಿ ಅರೆಸ್ಟ್

ಬಳ್ಳಾರಿ ಜಿಲ್ಲೆಯ ಘೋರ ಅಪಘಾತ:  ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಇಟ್ಟಿಗೆ ತುಂಬಿದ ಟ್ರ್ಯಾಕ್ಟರ್‌ ಟ್ರಾಲಿಗೆ ಬೈಕ್‌ ಡಿಕ್ಕಿ(Collision) ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ(Death) ಬಳ್ಳಾರಿಯಿಂದ ವರದಿಯಾಗಿತ್ತು. ತಾಲೂಕಿನ ಬಾದನಹಟ್ಟಿ ಗ್ರಾಮದ ಸಪ್ತಗಿರಿ ಕ್ಯಾಂಪ್‌ ಬಳಿ ಈ ಘಟನೆ ಜರುಗಿದೆ. ಮೃತಪಟ್ಟವರನ್ನು ಬಾದನಹಟ್ಟಿ ಗ್ರಾಮ ನಿವಾಸಿಗಳಾದ ಗೊಲ್ಲರ ಗೋಪಾಲ(28), ಕರಿ ಬ್ಯಾಡರ ಕರಿಬಸಪ್ಪ(32), ಕರಿಬ್ಯಾಡರ ದೊಡ್ಡಬಸಪ್ಪ(30) ಎಂದು ಗುರುತಿಸಲಾಗಿತ್ತು. ಸಿದ್ದಮ್ಮನಹಳ್ಳಿ ರಸ್ತೆ ಪಕ್ಕದಲ್ಲಿರುವ ತಮ್ಮ ಜಮೀನಿನಿಂದ ಗ್ರಾಮಕ್ಕೆ ವಾಪಾಸ್‌ ಮರಳುವಾಗ ಈ ಘಟನೆ ಜರುಗಿತ್ತು

ಬೆಳ್ಳಂಬೆಳಗ್ಗೆ ಅಪಘಾತ: 6 ಮಂದಿಗೆ ಗಂಭೀರ ಗಾಯ:  ಚಿಂತಾಮಣಿ( ತಾಲೂಕಿನ ಬೆಂಗಳೂರು ಕಡಪ ಹೈವೇ ರಸ್ತೆಯ ಐಮರೆಡ್ಡಿಹಳ್ಳಿ ಸಮೀಪ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಗಂಭೀರ ಗಾಯಗೊಂಡಿದ್ದರು.

ತಲೆ ಮೇಲೆ ಟಿಪ್ಪರ್‌ ಚಕ್ರ ಉರುಳಿ ಬಿಇ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು:  ಬೆಂಗಳೂರು:  ಟಿಪ್ಪರ್‌ ಡಿಕ್ಕಿಯಾಗಿ ದ್ವಿ ಚಕ್ರ ವಾಹನದ ಹಿಂದೆ ಕುಳಿತಿದ್ದ ವಿದ್ಯಾರ್ಥಿನಿ(Student) ತಲೆ ಮೇಲೆ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಟ್ಟಿದ್ದಳು. ಬೆಂಗಳೂರು ಅಶೋಕನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು.

ಆರ್‌.ಎಸ್‌.ಪಾಳ್ಯ ನಿವಾಸಿ ಸಂಜನಾ ಪ್ರಿಯಾ (21) ಮೃತ ವಿದ್ಯಾರ್ಥಿನಿ. ದ್ವಿಚಕ್ರ ವಾಹನ ಚಾಲಕ ವಿನಯ್‌ಕುಮಾರ್‌(24) ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಸಂಜನಾ ಪ್ರಿಯಾ ನಗರದ ಖಾಸಗಿ ಎಂಜಿನಿಯರ್‌ ಕಾಲೇಜಿನಲ್ಲಿ ಅಂತಿಮ ಬಿಇ ವ್ಯಾಸಂಗ ಮಾಡುತ್ತಿದ್ದರು. ಸೋದರ ಸಂಬಂಧಿ ವಿನಯ್‌ಕುಮಾರ್‌ ಜತೆಗೆ ದ್ವಿಚಕ್ರ ವಾಹನದಲ್ಲಿ ಜಯ ನಗರದ ಸಂಬಂಧಿಕರ ಮನೆಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿತ್ತು. 

Follow Us:
Download App:
  • android
  • ios