ದಿನೇಶ್ ಕಲ್ಲಹಳ್ಳಿ ವಿರುದ್ಧ ದಾಖಲಾಯ್ತು ದೂರು/ ಕರ್ನಾಟಕ ಕನ್ನಡಪರ ಸಂಘಟನೆ ಒಕ್ಕೂಟ ಸಂಸ್ಥಾಪಕ ಅಧ್ಯಕ್ಷ ಪಟ್ಟೇಗೌಡರಿಂದ ದೂರು/ ಕಬ್ಬನ್ ಪಾರ್ಕ್‌ ಠಾಣೆಯಲ್ಲಿ ದಾಖಲಾದ ಕಂಪ್ಲೆಂಟ್/ ಇದು‌ ಇಬ್ಬರ ಸಮ್ಮತಿಯಿಂದ ನಡೆದಿರುವ ದೈಹಿಕ ಕ್ರಿಯೆ/ ರಮೇಶ್ ಜಾರಕಿಹೊಳಿ ಖಾಸಗಿ ವಿಡಿಯೋ ವೈರಲ್ ಮಾಡಿಸಿದ್ದಾರೆ

ಬೆಂಗಳೂರು(ಮಾ. 03) ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಮಾಡಿ ದೂರು ಕೊಟ್ಟಿದ್ದ ದಿನೇಶ್ ಕಲ್ಲಹಳ್ಳಿ ವಿರುದ್ಧವೇ ದೂರು ದಾಖಲಾಗಿದೆ. ಕರ್ನಾಟಕ ಕನ್ನಡಪರ ಸಂಘಟನೆ ಒಕ್ಕೂಟ ಸಂಸ್ಥಾಪಕ ಅಧ್ಯಕ್ಷ ಪಟ್ಟೇಗೌಡ ದೂರು ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಕಬ್ಬನ್ ಪಾರ್ಕ್‌ ಠಾಣೆಗೆ ಕಂಪ್ಲೆಂಟ್ ಕೊಟ್ಟಿದ್ದಾರೆ. ಇದು‌ ಇಬ್ಬರ ಸಮ್ಮತಿಯಿಂದ ನಡೆದಿರುವ ದೈಹಿಕ ಕ್ರಿಯೆ. ರಮೇಶ್ ಜಾರಕಿಹೊಳಿ ಖಾಸಗಿ ವಿಡಿಯೋ ವೈರಲ್ ಮಾಡಿಸಿದ್ದಾರೆ. ದಿನೇಶ್ ಕಲ್ಲಹಳ್ಳಿಗೂ ಈ ವಿಡಿಯೋಗೂ ಏನು ಸಂಬಂಧ? ಅವರ ಚಾರಿತ್ರ್ಯ ವಧೆ ಮಾಡಲು ನಡೆದಿರುವ ಕುತಂತ್ರ ಇದು. ಅವರ ಖಾಸಗಿ ಜೀವನದಲ್ಲಿ ಏನನ್ನು ಬೇಕಾದ್ರೂ ಮಾಡಿಕೊಳ್ಳಬಹುದು. ಅದನ್ನ ಚಿತ್ರೀಕರಿಸಿ ಬಿತ್ತರಿಸಿರೋದು ತಪ್ಪು ಎಂದು ಆರೋಪಿಸಿದ್ದಾರೆ.

'ಇದು ಪಕ್ಕಾ ಹನಿ ಟ್ರ್ಯಾಪ್... ರಮೇಶ್ ಅವರೇ ಇಲ್ಲಿ ಸಂತ್ರಸ್ತ'!

ಯುವತಿಗೆ ಅನ್ಯಾಯವಾಗಿದ್ದರೇ ಆಕೆಯೇ ದೂರು ನೀಡಬಹುದಿತ್ತಲ್ವಾ? ತಕ್ಷಣ ದಿನೇಶ್ ಕಲ್ಲಹಳ್ಳಿ ಬಂಧಿಸಿ ವಿಚಾರಣೆ ನಡೆಸಬೇಕೆಂದು ಆಗ್ರಹಿಸಲಾಗಿದೆ. ಒಟ್ಟಿನಲ್ಲಿ ಸಿಡಿ ಪ್ರಕರಣ ಒಂದು ಕಡೆ ರಾಜಕೀಯ ಸಂಚಲನ ತಂದಿದ್ದು ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ.

"