ಬೇರೆ ಅಭ್ಯರ್ಥಿಯ ಹೆಸರಲ್ಲಿ ಪರೀಕ್ಷೆ ಬರೆಯುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಿಕ್ಕಿಬಿದ್ದಿದ್ದಾನೆ.

ಹುಬ್ಬಳ್ಳಿ, (ನ.22): ಬೇರೆ ಅಭ್ಯರ್ಥಿಯ ಹೆಸರಲ್ಲಿ ಪರೀಕ್ಷೆ ಬರೆಯುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಿಕ್ಕಿಬಿದ್ದಿರುವ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ರಾಯಭಾಗ ಮೂಲದ ಮಣಿಕಂಠ ಸಿಕ್ಕಿಬಿದ್ದಿರುವ ಪೊಲೀಸ್‌ ಕಾನ್ಸ್‌ಟೇಬಲ್. ಈತ ಹುಬ್ಬಳ್ಳಿ- ಧಾರವಾಡದಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳ ಭರ್ತಿಗೆ ನಡೆಯುತ್ತಿದ್ದ ಲಿಖಿತ ಪರೀಕ್ಷೆ. ಬೇರೊಬ್ಬನ ಹೆಸರಲ್ಲಿ ಪರೀಕ್ಷೆಗೆ ಹಾಜರಾಗಿದ್ದ.

ಟಿಇಟಿ: ಎರಡು ಲಕ್ಷ ಅಭ್ಯರ್ಥಿಗಳಲ್ಲಿ 8000 ಪಾಸ್‌..!

ಡಿಸಿಪಿ ಕೆ.ರಾಮರಾಜನ್ ಅವರಿಗೆ ಈ ಕುರಿತು ಮಾಹಿತಿ ಸಿಕ್ಕಿತ್ತು. ಡಿಸಿಪಿ ಮಾರ್ಗದರ್ಶನದಲ್ಲಿ ಗೋಕುಲ ರಸ್ತೆ ಠಾಣೆ ಪೊಲೀಸರ ಪರಿಶೀಲನೆ ವೇಳೆ ಬೇರೊಬ್ಬ ಅಭ್ಯರ್ಥಿಯ ಪರವಾಗಿ ಪರೀಕ್ಷೆ ಬರೆಯುತ್ತಿದ್ದ ಕಾನ್ಸ್‌ಟೇಬಲ್ ಮಣಿಕಂಠ ಸಿಕ್ಕಿಬಿದ್ದಿದ್ದಾನೆ.