ಶಿವಮೊಗ್ಗದ ಬೈಪಾಸ್ ರಸ್ತೆಯ ಗರುಡ ಲೇಔಟ್‌ನಲ್ಲಿ ವಿಷ ಸೇವಿಸಿ ವಾಸುದೇವ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಶಿವಮೊಗ್ಗ ಮಹಾನಗರ ಪಾಲಿಕೆಯ ಗುತ್ತಿಗೆದಾರಾಗಿದ್ದ ವಾಸುದೇವ್ ಲಕ್ಷಾಂತರ ರು. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. 

ಶಿವಮೊಗ್ಗ(ಜೂ.13): ಸಾಲಬಾಧೆಯಿಂದ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಿನ್ನೆ(ಬುಧವಾರ) ನಡೆದಿದೆ. ಶಿವಮೊಗ್ಗದ ಹರಿಗೆ ಗ್ರಾಮದ ವಾಸುದೇವ (50) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಿವಮೊಗ್ಗದ ಬೈಪಾಸ್ ರಸ್ತೆಯ ಗರುಡ ಲೇಔಟ್‌ನಲ್ಲಿ ವಿಷ ಸೇವಿಸಿ ವಾಸುದೇವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆಯ ಗುತ್ತಿಗೆದಾರಾಗಿದ್ದ ವಾಸುದೇವ್ ಲಕ್ಷಾಂತರ ರು. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲ ತೀರಿಸಲಾಗಿದೆ ಇತ್ತ ಗುತ್ತಿಗೆಗಳು ಸಿಗದ ಹಿನ್ನೆಲೆ, ಮನನೊಂದಿದ್ದರು. ನಿನ್ನೆ ಸಂಜೆಯ ವೇಳೆ ವಿಷ ಸೇವಿಸಿ ಗದ್ದೆಯಲ್ಲಿ ಬಿದ್ದಿದ್ದ ವಾಸುದೇವನನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. 

ಬೆಳಗಾವಿ: ಕುಡಿದ ಅಮಲಿನಲ್ಲಿ ನೇಣು ಬಿಗಿದುಕೊಂದು ಪೊಲೀಸ್ ಕಾನ್ಸಟೇಬಲ್‌ ಆತ್ಮಹತ್ಯೆ

ಶವವನ್ನು ಮೆಗ್ಗಾನ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಗುತ್ತಿಗೆದಾರ ವಾಸುದೇವ ನಿಧನಕ್ಕೆ ಮಹಾನಗರ ಪಾಲಿಕೆ ಗುತ್ತಿಗೆದಾರರಿಂದ ಸಂತಾಪ ಸೂಚಿಸಿದ್ದಾರೆ. 

ಕೊರೋನಾ ನಂತರ ಕಾಮಗಾರಿಗಳು ತೀರ ವಿರಳವಾಗಿದ್ದು ಹಲವಾರು ಗುತ್ತಿಗೆದಾರರು ಸಾಲ ಮಾಡಿಕೊಂಡಿದ್ದಾರೆ . ಇದರಿಂದಾಗಿ ಸಾಲ ತೀರಿಸಲಾಗಿದೆ ಆತ್ಮಹತ್ಯೆ ಪರಿಸ್ಥಿತಿ ಬಂದಿದೆ ಎದು ಗುತ್ತಿಗೆದಾರ ಸಂಘದ ಕಾರ್ಯದರ್ಶಿ ನಫೀಜ್ ತಿಳಿಸಿದ್ದಾರೆ. 

ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.