ಡೆಕೋರೇಷನ್ ಮಳಿಗೆಗೆ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ಸಾಮಗ್ರಿಗಳು ಸುಟ್ಟು ಕರಕಲಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ನಂದಿನಿ ಲೇಔಟ್‌ನಲ್ಲಿ ನಡೆದಿದೆ. ಅಮರಶೆಟ್ಟಿ ಒಡೆತನದ ಡೆಕೋರೇಷನ್‌ ಮಳಿಗೆ.

ರಾಯಚೂರು (ಡಿ.29): ಡೆಕೋರೇಷನ್ ಮಳಿಗೆಗೆ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ಸಾಮಗ್ರಿಗಳು ಸುಟ್ಟು ಕರಕಲಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ನಂದಿನಿ ಲೇಔಟ್‌ನಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಅಮರಶೆಟ್ಟಿ ಒಡೆತನದ ಡೆಕೋರೇಷನ್‌ ಮಳಿಗೆ. ಬೆಂಕಿಹೊತ್ತಿಕೊಂಡಿದ್ದು ಹೇಗೆ ಎಂಬುದು ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್, ಬೆಂಕಿ ಕಡ್ಡಿಯಿಂದ ಕಿಡಿ ಹೊತ್ತಿರುವ ಶಂಕೆ. ಬೆಂಕಿಯ ಕೆನ್ನಾಲಗೆಗೆ ಅಂಗಡಿಯಲ್ಲಿದ್ದ ಆಲಂಕಾರಿಕ ಸಾಮಗ್ರಿಗಳು ಸುಟ್ಟು ಭಸ್ಮ. ಮದುವೆ ಪೆಂಡಾಲ್, ಬಟ್ಟೆಗಳಿಗೆ ತಗುಲಿ ಹೊತ್ತಿ ಉರಿದಿರುವ ಬೆಂಕಿ. ನೋಡನೋಡುತ್ತಿದ್ದಂತೆ ಸಂಪೂರ್ಣ ಸುಟ್ಟು ಹೋದ ಮಳಿಗೆ. 

ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮುಂದುವರಿಸಿದ ಸಿಬ್ಬಂದಿ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.

ಶಾಸಕ ಜನಾರ್ದನರೆಡ್ಡಿ ಕುಟೀರಕ್ಕೆ ಬೆಂಕಿ ಇಟ್ಟವರಾರು ? ಜನಪ್ರಿಯತೆ ಸಹಿಸದೆ ಬಿಜೆಪಿ ಕಾರ್ಯಕರ್ತರೇ ಹಚ್ಚಿದ್ರಾ ಕಿಡಿ?!